ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯಕ್ಕೆ ಕೇಂದ್ರದಿಂದ ಆರ್ಥಿಕ ನೆರವು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯಕ್ಕೆ ಕೇಂದ್ರದಿಂದ ಆರ್ಥಿಕ ನೆರವು
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಜೀವವೈವಿಧ್ಯ ಸಂರಕ್ಷಣೆಗೆ ಅಗತ್ಯವಾದ ಆರ್ಥಿಕ ನೆರವು ಕಲ್ಪಿಸಬೇಕು, ವಿವಿಧ ಯೋಜನೆಗಳಿಗೆ ಆದಷ್ಟು ಬೇಗ ಮಂಜೂರಾತಿ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಅರಣ್ಯ ಖಾತೆ ರಾಜ್ಯ ಸಚಿವರಾದ ಜೈರಾಂ ರಮೇಶ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ನಗರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವರ ಜೊತೆ ಸಭೆ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ಬಾಕಿ ಉಳಿದಿರುವ ರಾಜ್ಯದ ವಿವಿಧ ಯೋಜನೆಗಳಿಗೆ ಶೀಘ್ರ ಮಂಜೂರಾತಿ ನೀಡಬೇಕು. ಈ ಮೂಲಕ ರಾಜ್ಯದ ಅಭಿವೃದ್ದಿ ಯೋಜನೆಗಳು ಮತ್ತು ಪರಿಸರ ಸಂರಕ್ಷಣೆ ಪ್ರಯತ್ನಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯದ ಬಿಳಿಗಿರಿರಂಗನ ಬೆಟ್ಟದ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಬೇಕು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವದ ಸರಹದ್ದುಗಳನ್ನು ಸಂರಕ್ಷಿಸುವ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ನೀಡಬೇಕು. ಪರಿಸರ ರಕ್ಷಣೆ ಮತ್ತು ಅಭಿವೃದ್ದಿ ಎರಡನ್ನೂ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗೆ ಅಗತ್ಯ ಪ್ರಮಾಣದಲ್ಲಿ ಆರ್ಥಿಕ ನೆರವು ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಕೋರಿಕೆ ಸಲ್ಲಿಸಿದರು.

ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಅಭಿವೃದ್ದಿಗೆ 700 ಕೋಟಿ ರೂ. ಬಿಡು ಮಾಡುವುದಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನ್ಯಾಯಬೆಲೆ ಅಂಗಡಿ-ಮೋಸ ಮಾಡಿದ್ರೆ ಜಾಗ್ರತೆ: ಸಿಎಂ
ಸಿಎಂಗೆ ಗಡುವು ವಿಧಿಸುವುದು ಸರಿಯಲ್ಲ: ಧನಂಜಯ್
ಸಿಲಿಕಾನ್ ಸಿಟಿ ಸ್ಫೋಟಕ್ಕೂ ಸಯೀದ್ ಸಂಚು!
ಭಿನ್ನಮತ ಇದ್ದದ್ದು ಹೌದು: ಕೆ.ಎಸ್. ಈಶ್ವರಪ್ಪ
ಕಾರ್ಕಳ ನಿವಾಸಿಗೆ ಎಚ್‌1ಎನ್‌1 ಸೋಂಕು ಶಂಕೆ
ಜೇಟ್ಲಿ ಸಾರಥ್ಯದಲ್ಲಿ ಬಂಡಾಯ ಶಮನಕ್ಕೆ ಯತ್ನ?