ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಎಚ್.ಡಿ.ಕುಮಾರಸ್ವಾಮಿ ಬಂಧನಕ್ಕೆ ಕೋರ್ಟ್ ವಾರಂಟ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಚ್.ಡಿ.ಕುಮಾರಸ್ವಾಮಿ ಬಂಧನಕ್ಕೆ ಕೋರ್ಟ್ ವಾರಂಟ್
NRB
ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗದ ಜೆಎಂಎಫ್‌ಸಿ ನ್ಯಾಯಾಲಯ ಮಾಜಿ ಮುಖ್ಯಮಂತ್ರಿ, ಸಂಸದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಶಿವನಗೌಡ ನಾಯಕ್ ವಿರುದ್ಧ ಶುಕ್ರವಾರ ಬಂಧನದ ವಾರಂಟ್ ಜಾರಿ ಮಾಡಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆ ಕುರಿತಂತೆ ಇಂದು ಕುಮಾರಸ್ವಾಮಿ ಹಾಗೂ ಶಿವನಗೌಡ ನಾಯಕ್ ದೇವದುರ್ಗ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಇಬ್ಬರೂ ಗೈರು ಹಾಜರಾಗಿದ್ದರಿಂದ ನ್ಯಾಯಾಧೀಶರು ಇಬ್ಬರ ವಿರುದ್ಧ ಬಂಧನ ವಾರಂಟ್ ಹೊರಡಿಸಿ ಆದೇಶ ನೀಡಿದರು.

ಪ್ರಕರಣದ ವಿವರ: 2008ರಲ್ಲಿ ನಡೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ದೇವದುರ್ಗದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಶಿವನಗೌಡ ನಾಯಕ್ ಪರ ಪ್ರಚಾರ ಮಾಡಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೇವದುರ್ಗಕ್ಕೆ ತೆರಳಿದ್ದರು. ಆದರೆ ಕುಮಾರಸ್ವಾಮಿ ಅವರು ಅವಧಿ ಮೀರಿ ಆಗಮಿಸಿದ್ದರು ಎಂಬ ಆರೋಪದ ಮೇಲೆ ಎಚ್‌ಡಿಕೆ, ಶಿವನಗೌಡ(ಹಾಲಿ ಬಿಜೆಪಿ ಸಚಿವ), ಪಕ್ಷದ ಅಧ್ಯಕ್ಷ ರಿಜ್ವಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಆರಂಭದ ವಿಚಾರಣೆಗೆ ಎಚ್.ಡಿ.ಕುಮಾರಸ್ವಾಮಿ ಅವರು ಹಾಜರಾಗಿ ಹೇಳಿಕೆ ನೀಡಿದ್ದರು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನಂತರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರೆಡ್ಡಿಗಳು ಒಡಕು ಉಂಟು ಮಾಡಬಾರದು: ಚಂದ್ರು
ಈ ಹಿಂದೆ ವಿಜ್ಞಾನಿ ಮಹಾಲಿಂಗಂ ಹೀಗೆ ನಾಪತ್ತೆಯಾಗಿದ್ದರು!
ಸಾದರ ಲಿಂಗಾಯಿತ ವಿವಾದಿತ ಆದೇಶ ವಾಪಸ್
ಭಿನ್ನಮತವಿಲ್ಲ-ಜೇಟ್ಲಿ ಭೇಟಿ ಔಪಚಾರಿಕ!: ಸದಾನಂದ ಗೌಡ
ಜುಲೈ 9ರಿಂದ24: ವಿಧಾನಮಂಡಲ ಅಧಿವೇಶನ
ಠಾಣೆಯಲ್ಲಿ ಅಕ್ರಮ ಬಂಧನ: ಆಯೋಗ ಛೀಮಾರಿ