ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪ್ರಯತ್ನದ ಫಲವಾಗಿ ಜಿಲ್ಲೆಗೆ ರೈಲ್ವೆ ಯೋಜನೆ: ರಾಘವೇಂದ್ರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ರಯತ್ನದ ಫಲವಾಗಿ ಜಿಲ್ಲೆಗೆ ರೈಲ್ವೆ ಯೋಜನೆ: ರಾಘವೇಂದ್ರ
ಸಾಕಷ್ಟು ಪ್ರಯತ್ನ ನಡೆಸಿದ ಬಳಿಕ ಶಿವಮೊಗ್ಗ ಜಿಲ್ಲೆಗೆ ಎರಡು ರೈಲ್ವೆ ಯೋಜನೆಗಳನ್ನು ಮಂಜೂರು ಮಾಡಿಸಲಾಗಿದ್ದು, ಇನ್ನಷ್ಟು ಬೇಡಿಕೆ ಈಡೇರಿಕೆ ಸಂಬಂಧ ರೈಲ್ವೆ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಲಾಗುವುದು ಎಂದು ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಂಸದರಾಗಿ ಕೇವಲ ಎರಡು ತಿಂಗಳಲ್ಲಿ ಇಂತಹ ಸಾಧನೆ ಮಾಡಿರುವುದಕ್ಕೆ ಹೆಮ್ಮೆ ಎನಿಸಿದೆ. ಇದಕ್ಕೆ ರಾಜ್ಯ ಮತ್ತು ಕೇಂದ್ರ ರೈಲ್ವೆ ಸಚಿವರ ಸಹಕಾರವೇ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಿವಮೊಗ್ಗ-ತಾಳಗುಪ್ಪ ರೈಲ್ವೆ ಮಾರ್ಗ ಪರಿವರ್ತನೆ ಪೂರ್ತಿ ಕಾರ್ಯಕ್ಕೆ ಬಜೆಟಿನಲ್ಲಿ ಕೇವಲ 36 ಕೋಟಿ ರೂ. ಮಂಜೂರಾಗಿದೆ. ಆದರೆ ಇದಕ್ಕೆ 141 ಕೋಟಿ ರೂ. ಬೇಕಾಗುತ್ತದೆ. ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಮತ್ತೊಮ್ಮೆ ಸಚಿವರಲ್ಲಿ ಚರ್ಚೆ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಜ್ಯದ ರೈಲ್ವೆ ಸಮಸ್ಯೆಗಳ ಬಗ್ಗೆ ರೈಲ್ವೆ ಇಲಾಖೆ ರಾಜ್ಯ ಸಚಿವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸುತ್ತೇನೆ ಎಂದು ಅವರು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸೋಮಣ್ಣ ಅಬ್ಬರಕ್ಕೆ ಪ್ರಜ್ಞೆ ಕಳೆದುಕೊಂಡ ಇಂಜಿನಿಯರ್
ಭಾಷಾ ವಿವಾದ; ಸೀಎಂ ಜತೆ ಚರ್ಚೆ : ಕಾಗೇರಿ
5 ವರ್ಷದೊಳಗೆ ನ್ಯಾಯಾಂಗದಲ್ಲಿ ಸುಧಾರಣೆ: ಮೊಯ್ಲಿ
ಬೆಂಗಳೂರು-ಮಂಗಳೂರು ನಡುವೆ ಹಗಲು ರೈಲು
ಲಿಬಾರ್ಹಾನ್ ವರದಿ ಅಪೂರ್ಣ: ಪೇಜಾವರ ಶ್ರೀ ಅಸಮಾಧಾನ
ನ್ಯಾಯಾಂಗ ತನಿಖೆ ಅಗತ್ಯವಿಲ್ಲ: ಆಚಾರ್ಯ