ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಜೆಟ್ ಬಡವರ ಮುಂಗಡ ಪತ್ರ: ದೇಶಪಾಂಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಜೆಟ್ ಬಡವರ ಮುಂಗಡ ಪತ್ರ: ದೇಶಪಾಂಡೆ
NRB
ಯುಪಿಎ ಸರ್ಕಾರ ಇಂದು ಮಂಡಿಸಿದ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕೇಂದ್ರದ ಬಜೆಟ್ ಪತ್ರ ಬಡವರ ಮುಂಗಡ ಪತ್ರವಾಗಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವರ್ಗಗಳಿಗೂ ಅನುಕೂಲವಾಗುವಂತಹ ಪ್ರಗತಿಪರ ಬಜೆಟ್‌ನ್ನು ಕೇಂದ್ರ ಸರ್ಕಾರ ಮಂಡಿಸಿರುವುದು ಅಭಿನಂದನಾರ್ಹ ಎಂದು ತಿಳಿಸಿದ್ದಾರೆ.

ಬಂಡವಾಳ ಹೂಡಿಕೆದಾರರಿಗೆ ಸೇರಿದಂತೆ ಯಾರಿಗೂ ಹೊರೆಯಾಗದಂತೆ ಶೇ.9ರ ಜಿಡಿಪಿ ಗುರಿಯನ್ನು ತಲುಪಲು ಮಂಡಿಸಿರುವ ಬಜೆಟ್ ಅನ್ನು ಪ್ರತಿಪಕ್ಷಗಳು ಸ್ವಾಗತಿಸಬೇಕೆಂದು ಅವರು ಹೇಳಿದ್ದಾರೆ.

ದೇಶದ ಬಡವರಿಗೆ ಆಹಾರ ಭದ್ರತೆ ಒದಗಿಸಲು ಕೇವಲ 3 ರೂ.ಗೆ ಒಂದು ಕೆಜಿ ಅಕ್ಕಿ ಅಥವಾ ಗೋಧಿಯಂತೆ ಬಿಪಿಎಲ್ ಕುಟುಂಬಗಳಿಗೆ 25 ಕೆಜಿ ಅಕ್ಕಿ ಅಥವಾ ಗೋಧಿ ನೀಡಲು ನಿರ್ಧರಿಸಿ ಯುಪಿಎ ಸರ್ಕಾರ ಈ ಹಿಂದೆ ನೀಡಿದ ಭರವಸೆಯನ್ನು ಈಡೇರಿಸಿದೆ ಎಂದು ಅವರು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಂಪೂರ್ಣ ನಿರಾಶದಾಯಕ ಬಜೆಟ್: ಯಡಿಯೂರಪ್ಪ
ಸಚಿವ ಸೋಮಣ್ಣ ವಿರುದ್ಧ ಇಂಜಿನಿಯರ್ ಪತ್ನಿ ದೂರು
ನಕಲಿ ನೋಟು : ಪೂಜಾರಿ ವಿರುದ್ಧದ ವಂಚನೆ ಪ್ರಕರಣ ವಜಾ
ಪರೀಕ್ಷಾ ಸುಧಾರಣೆ: ಕಸ್ತೂರಿ ರಂಗನ್, ಮುಖ್ಯಮಂತ್ರಿ ಚರ್ಚೆ
ಕರಾವಳಿಯಲ್ಲಿ ಭಾರೀ ಮಳೆ, ಶಾಲೆಗಳಿಗೆ ರಜೆ
ಕರ್ನಾಟಕ ಪ್ರತಿಕ್ರಿಯೆ: ಐಟಿ ವಲಯದಲ್ಲಿ ಆಶಾವಾದ