ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗಣಿಗಾರಿಕೆ: ಸರ್ಕಾರದ ವಿರುದ್ಧ ಲೋಕಾಯುಕ್ತ ಕಿಡಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗಣಿಗಾರಿಕೆ: ಸರ್ಕಾರದ ವಿರುದ್ಧ ಲೋಕಾಯುಕ್ತ ಕಿಡಿ
ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ಸಲ್ಲಿಸಿರುವ ವರದಿಯ ಅನುಷ್ಠಾನ ಕುರಿತಂತೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರ ವರದಿ ಕುರಿತು ಸರ್ಕಾರ ಕಾಗದದ ಮೇಲೆ ಮಾತ್ರ ಕ್ರಮ ಕೈಗೊಂಡಿದೆ. ಆದರೆ ವಾಸ್ತವದಲ್ಲಿ ಅಕ್ರಮ ಗಣಿಗಾರಿಕೆ ನಿರಂತರವಾಗಿ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಾಯುಕ್ತರು ಸಲ್ಲಿಸಿರುವ ವರದಿಯಲ್ಲಿ ಮಾಡಿರುವ ಶಿಫಾರಸುಗಳನ್ನು ಜಾರಿಗೆ ತರಲು ವಿವಿಧ ಇಲಾಖೆಗಳಿಗೆ ಆದೇಶ ನೀಡಲಾಗಿದೆ ಎಂದು ಸರ್ಕಾರ ತನ್ನ ಅನುಷ್ಠಾನ ವರದಿಯಲ್ಲಿ ಹೇಳಿದೆ. ಮೇಲ್ನೋಟಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರೂ, ಇದುವರೆಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಮಿನರಲ್ಸ್‌ನಲ್ಲಿ ನಡೆದಿರುವ ಅವ್ಯವಹಾರ ಕುರಿತು 10 ಅಧಿಕಾರಿಗಳಿಗೆ ಕೇವಲ ಷೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ತಾವು ಇಲ್ಲಿ 600 ಕೋಟಿ ರೂ.ಗಳಷ್ಟು ಹಣ ಸರ್ಕಾರಕ್ಕೆ ನಷ್ಟವಾಗಿದೆ ಎಂದು ತಿಳಿಸಿದ್ದರೆ, ಸರ್ಕಾರ, ಕೇವಲ 140 ಕೋಟಿ ರೂ. ಮಾತ್ರ ನಷ್ಟವಾಗಿದೆ ಎಂದು ಹೇಳಿದೆ ಎಂದು ಆರೋಪಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿನಿವಿಂಕ್ ಶಾಸ್ತ್ರೀಗೆ ಸುಪ್ರೀಂನಿಂದ ಜಾಮೀನು
ನಾಣಯ್ಯ ಹುಚ್ಚುಚ್ಚಾಗಿ ಮಾತಾಡ್ತಾರೆ ಅಂದ ರೆಡ್ಡಿ
ಡೆಲ್ಲಿ ಮೆಟ್ರೋ ಬೆಂ ಮೆಟ್ರೋ ಮೇಲೆ ಪರಿಣಾಮ ಬೀರದು
ಚರ್ಚ್ ದಾಳಿ: ಸರ್ಕಾರಕ್ಕೆ ಶೀಘ್ರವೇ ಮಧ್ಯಂತರ ವರದಿ
ಬೆಂಗಳೂರಲ್ಲಿ ತಿರುವಳ್ಳುವರ್: ಆ.9ರಂದು ಕರುಣಾ ಉದ್ಘಾಟನೆ
ಶಾಸಕ-ಸಚಿವರ ಗಲಾಟೆ: ವರದಿ ಕೇಳಿದ ಡಿವಿ