ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕೆಎಂಎಫ್: 3ತಿಂಗಳ ನಂತ್ರ ಡಿ.ವಿ.ಗೆ ಅಧ್ಯಕ್ಷ ಪಟ್ಟ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೆಎಂಎಫ್: 3ತಿಂಗಳ ನಂತ್ರ ಡಿ.ವಿ.ಗೆ ಅಧ್ಯಕ್ಷ ಪಟ್ಟ
ಕರ್ನಾಟಕ ಹಾಲು ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಸಕ ಸೋಮಶೇಖರ ರೆಡ್ಡಿ ಅಧ್ಯಕ್ಷರಾಗಿ ಮೂರು ತಿಂಗಳು ಮಾತ್ರ ಕಾರ್ಯನಿರ್ವಹಿಸಲಿದ್ದು, ಮೂರು ತಿಂಗಳ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಗೌಡ ಕೆ.ಎಂ.ಎಫ್ ಅಧ್ಯಕ್ಷರಾಗಲಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ಸದಾನಂದ ಗೌಡರವರ ಅಧ್ಯಕ್ಷ ಅವಧಿ ನವೆಂಬರ್‌ಗೆ ಅಂತ್ಯವಾಗಲಿದ್ದು, ಮೂರನೇ ಬಾರಿ ಅಧ್ಯಕ್ಷರಾಗಲು ಬಿಜೆಪಿ ಪಕ್ಷದ ಸಂವಿಧಾನದಲ್ಲಿ ಅವಕಾಶವಿಲ್ಲ. ಹಾಗಾಗಿ ನವೆಂಬರ್‌ನಲ್ಲಿ ಪಕ್ಷದ ಅಧ್ಯಕ್ಷ ಗಾದಿಯಿಂದ ಕೆಳಗಿಳಿಯಲಿರುವ ಸದಾನಂದ ಗೌಡರು ಕೆಎಂಎಫ್ ಅಧ್ಯಕ್ಷ ಪಟ್ಟ ಏರಲಿದ್ದಾರೆ. ಇದಕ್ಕೆ ರೆಡ್ಡಿ ಸಹೋದರರು ಸಮ್ಮತಿ ನೀಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ಹೇಳಿವೆ.

ಈಗಾಗಲೇ ಸರ್ಕಾರದಲ್ಲಿ ಸಚಿವರಾಗಿರುವ ಗಣಿ ರೆಡ್ಡಿ ಸಹೋದರರ ಜೊತೆ ಸೋಮಶೇಖರ ರೆಡ್ಡಿಯವರನ್ನು ಅಧ್ಯಕ್ಷರನ್ನಾಗಿಸಲಾಗಿದೆ. ಇದೊಂದು ತಾತ್ಕಾಲಿಕ ವ್ಯವಸ್ಥೆಯಷ್ಟೇ ಮುಂದೆ ಅಧ್ಯಕ್ಷರಾಗಿ ಸದಾನಂದ ಗೌಡ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಿಯುಸಿ ಸಪ್ಲಿಮೆಂಟರಿ ಫಲಿತಾಂಶ ಪ್ರಕಟ
ರಾಜ್ಯದ ಮುಂದಿನ ಸಿಎಂ ಸಿದ್ದರಾಮಯ್ಯ: ವರ್ತೂರ್
ಜೆಡಿಎಸ್ ಆಳ್ವಿಕೆ ಅಂತ್ಯ; ಕೆಎಂಎಫ್ ಅಧ್ಯಕ್ಷರಾಗಿ ರೆಡ್ಡಿ
ಮೈಸೂರು ಗಲಭೆ; ಮುತಾಲಿಕ್ ಮತ್ತೆ ಬಂಧನ
ಗಣಿಧಣಿಗಳ ಕೇಸ್ ವಾಪಸ್: ಆಚಾರ್ಯ ಸಮರ್ಥನೆ
ಉಪಚುನಾವಣೆಯಲ್ಲಿ ಏಕಾಂಗಿ ಹೋರಾಟ: ಎಚ್‌ಡಿಕೆ