ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಆ.9ಕ್ಕೆ ಬಂದ್ ನಡೆಸಿದ್ರೆ ಕಠಿಣ ಕ್ರಮ; ಕರವೇಗೆ ಸಿಎಂ (Yeddyurappa | Karnataka | Thiruvalluvar | Sarvajna | Chennai)
 
NRB
ತಿರುವಳ್ಳುವರ್ ಪ್ರತಿಮೆ ಅನಾವರಣ ಕುರಿತಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಮಾನವೇ ಅಂತಿಮ ಎಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಕನ್ನಡಪರ ಸಂಘಟನೆಗಳ ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂದು ಗುಡುಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ರಾಜ್ಯಗಳ ನಡುವಿನ ಸೌಹಾರ್ದತೆಯನ್ನು ಕದಡುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದ ಮುಖ್ಯಮಂತ್ರಿಗಳು, ಕನ್ನಡಪರ ಸಂಘಟನೆಗಳ ಬಂದ್‌ಗೆ ಅವಕಾಶ ನೀಡಲಾರೆವು. ಒಂದು ವೇಳೆ ಬಲವಂತದಿಂದ ಬಂದ್‌ಗೆ ಮುಂದಾದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಿರುವಳ್ಳುವರ್ ಪ್ರತಿಮೆ ಅನಾವರ ವಿವಾದ ಕುರಿತಂತೆ ಎರಡನೇ ಸುತ್ತಿನ ಮಾತುಕತೆಗಾಗಿ ಶುಕ್ರವಾರ ಸಂಜೆ ಕನ್ನಡಪರ ಸಂಘಟನೆಗಳ ಮುಖಂಡರನ್ನು ಆಹ್ವಾನಿಸಿದ್ದೆ, ಆದರೆ ಅವರಾರು ಸಭೆಗೆ ಹಾಜರಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಷ್ಠೆಗಾಗಿ ಪ್ರತಿಭಟನೆ, ವಿರೋಧ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

ನಿಗದಿಯಂತೆ ಆಗಸ್ಟ್ 9ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಅದೇ ರೀತಿ ಆ.13ರಂದು ಚೆನ್ನೈನ ಅಯನಾವರಂನಲ್ಲಿ ಸರ್ವಜ್ಞ ಪ್ರತಿಮೆ ಅನಾವರಣಗೊಳ್ಳಲಿದೆ.

ತಿರುವಳ್ಳುವರ್ ಪ್ರತಿಮೆ ಅನಾವರಣ ವಿವಾದದ ಕುರಿತು ಕನ್ನಡಪರ ಸಂಘಟನೆಗಳು ಸಲ್ಲಿಸಿದ್ದ ಪಿಐಎಲ್ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಆ.9ರಂದು ಬಂದ್ ಮಾಡಿದ್ರೆ ಕನ್ನಡಪರ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

ತಿರುವಳ್ಳುವರ್ ಪ್ರತಿಮೆ ಅನಾವರಣ ಕುರಿತ ಪ್ರಕರಣದ ತುರ್ತು ವಿಚಾರಣೆ ಅನಗತ್ಯ ಎಂದಿರುವ ರಾಜ್ಯ ಹೈಕೋರ್ಟ್, ಜಾತಿ, ಭಾಷೆ ಆಧಾರದಲ್ಲಿ ದೇಶವನ್ನು ವಿಭಜಿಸಬೇಡಿ. ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆ ಅನಾವರಣ ಬೇಡವೇ?ಎಂದು ಗುರುವಾರ ಪಿಐಎಲ್‌ನ ತುರ್ತು ವಿಚಾರಣೆ ನಡೆಸಿ, ಕನ್ನಡ ಹೋರಾಟಗಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ತಿರುವಳ್ಳುವರ್ ಪ್ರತಿಮೆ ಅನಾವರಣ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ನಡುವೆ ಇರುವ ವಿವಾದವನ್ನು ಬಗೆಹರಿಸಿದ ನಂತರವೇ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡಬೇಕೆಂದು ಕನ್ನಡ ಪರ ಸಂಘಟನೆಗಳು ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದವು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ