ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋವಿಂದರಾಜನಗರ: ಕಾಂಗ್ರೆಸ್ ಬೆಂಬಲಕ್ಕೆ ದೇವೇಗೌಡ ಕರೆ (JDS | Deve gowda | BJP | Congress | Yeddyurappa)
 
NRB
ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಕಾವು ತೀವ್ರಗೊಂಡಿದ್ದು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣರನ್ನು ಬೆಂಬಲಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಜೆಡಿಎಸ್ ವರಿಷ್ಠರಾಗಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಭಾನುವಾರ ಬಹಿರಂಗವಾಗಿ ಕರೆ ನೀಡಿದರು.

ಗೋವಿಂದರಾಜ ನಗರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಪರ ಕ್ಷೇತ್ರದಲ್ಲಿ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅವರ ಗೆಲುವು ಖಚಿತ ಎಂದು ಅವರು ನುಡಿದಿದ್ದಾರೆ. ಆಪರೇಷನ್ ಕಮಲದ ಗಿರಾಕಿಗಳಿಗೆ ಪಾಠ ಕಲಿಸಿ, ಏನೋ ಅಭಿವೃದ್ಧಿ ಮಾಡಿ ಬಿಟ್ಟಿದ್ದೇನೆ ಎಂದು ಬಡಾಯಿ ಕೊಚ್ಚಿ ಕೊಳ್ಳುತ್ತಿರುವವರು ರಸ್ತೆ ಡಾಂಬರೀಕರಣ ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ವ್ಯಂಗ್ಯವಾಡಿದರು.

ಇದೀಗ ಜೆಡಿಎಸ್ ಬೆಂಬಲದಿಂದ ಪ್ರಿಯಕೃಷ್ಣ ಅವರಿಗೆ ಆನೆ ಬಲ ಬಂದಾಂತಾಗಿದೆ. ಮದ್ದಾನೆಗಳ ಕಾಳಗ ಎಂದೇ ಪರಿಗಣಿಸಲಾಗಿರುವ ಈ ಕ್ಷೇತ್ರದಲ್ಲಿ ಇದೀಗ ಜೆಡಿಎಸ್ ಬೆಂಬಲದಿಂದ ಕಾಂಗ್ರೆಸ್ ಉತ್ಸಾಹದ ಪ್ರಚಾರ ಮುಂದುವರಿಸಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ