ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಡಿಕೆಶಿ ವಿರುದ್ಧ ವಾಗ್ದಾಳಿ: ತೇಜಸ್ವಿನಿಗೆ ನೋಟಿಸ್ (Shiv kumar | Thejaswini | Congress | JDS)
Bookmark and Share Feedback Print
 
NRB
ಮೇಲ್ಮನೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರಾಜಯಗೊಂಡ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಧ್ಯಮದಲ್ಲಿ ಮಾಜಿ ಸಂಸದೆ ತೇಜಸ್ವಿನಿ ಬಹಿರಂಗವಾಗಿ ಕಿಡಿಕಾರಿದ್ದಕ್ಕೆ ಕಾರಣ ಕೇಳಿ ಕೆಪಿಸಿಸಿ ನೋಟಿಸ್ ಜಾರಿ ಮಾಡಿದೆ.

ತೇಜಸ್ವಿನಿ ಉದ್ದಟತನದ ಹೇಳಿಕೆಗೆ ಕಾರಣ ಕೇಳಿ ಪಕ್ಷದ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಎಚ್.ಹನುಮಂತಪ್ಪ ನೋಟಿಸ್ ಜಾರಿಗೊಳಿಸಿದ್ದು, ಪಕ್ಷದ ಕಾರ್ಯಾಧ್ಯಕ್ಷರ ವಿರುದ್ಧ ಹೇಳಿಕೆ ನೀಡುವ ಔಚಿತ್ಯವನ್ನು ಪ್ರಶ್ನಿಸಿ ಒಂದು ವಾರದೊಳಗೆ ವಿವರಣೆ ನೀಡುವಂತೆ ತಿಳಿಸಿದ್ದಾರೆ.

ಪಕ್ಷದೊಳಗಿನ ಆಂತರಿಕ ಸಮಸ್ಯೆ ಕುರಿತಂತೆ ಪಕ್ಷದ ವರಿಷ್ಠರಲ್ಲದೆ ಮತ್ಯಾರೂ ಮಾಧ್ಯಮಗಳ ಮುಂದೆ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ಕೂಡ ನೀಡಲಾಗಿದೆ.

ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಮೈತ್ರಿಯನ್ನು ಧಿಕ್ಕರಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ಕಾರಣವಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕೆಂದು ಮಾಜಿ ಸಂಸದೆ ತೇಜಸ್ವಿನಿ ವಾಗ್ದಾಳಿ ನಡೆಸಿದ್ದರು.

ಮೇಲ್ಮನೆ ಚುನಾವಣೆ ಫಲಿತಾಂಶದ ಕುರಿತು ಸೋಮವಾರ ಟಿವಿ9 ವಾಹಿನಿಯ ಚರ್ಚೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿನಿ ಅವರು, ಮೇಲ್ಮನೆ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಸಹ, ಡಿಕೆಶಿ ಅವರು ವೈಯಕ್ತಿಕ ಪ್ರತಿಷ್ಠೆಯಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಮೈತ್ರಿಯನ್ನು ವಿರೋಧಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ