ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೋಮುಗಲಭೆ: ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ (Bagalkot | Karnataka | VHP | BJP)
Bookmark and Share Feedback Print
 
ಕ್ಷುಲ್ಲಕ ಕಾರಣಕ್ಕೆ ಸಂಭವಿಸಿದ ಜಗಳವೊಂದು ಕೋಮು ಗಲಭೆಗೆ ತಿರುಗಿದ ಪರಿಣಾಮ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಅಂಗವಾಗಿ ನಗರದಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಇಲ್ಲಿನ ಕಿಲ್ಲೆ ಪ್ರದೇಶದಲ್ಲಿನ ಮೂರು ದೇವಸ್ಥಾನಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರಿಂದ ದೇವಾಲಯದ ಪ್ರವೇಶ ಭಾಗದ ಅಲಂಕಾರಿಕ ಮೂರ್ತಿಗಳು, ಪಾದಗಟ್ಟೆಗಳು ವಿಘ್ನಗೊಂಡಿವೆ.

ಈ ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಹಿಂದೇಟು ಹಾಕಿದ ಕ್ರಮವನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಮಂಗಳವಾರ ಬಂದ್‌ಗೆ ಕರೆ ನೀಡಿದ್ದು, ಅದು ಬುಧವಾರ ಕೂಡ ಮುಂದುವರಿದಿದೆ. ಇದರಿಂದ ನಗರ ಮತ್ತಷ್ಟು ಪ್ರಕ್ಷುಬ್ಧಗೊಂಡು ಅಲ್ಲಲ್ಲಿ ಕಲ್ಲು ತೂರಾಟ, ಹಲ್ಲೆ ಘಟನೆಗಳು ನಡೆದಿರುವುದು ವರದಿಯಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ