ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕನ್ನಡಿಗರಿಗೆ ಆದ್ಯತೆ ನೀಡದ ಕಂಪನಿ ಧ್ವಂಸ: ವಾಟಾಳ್ ಎಚ್ಚರಿಕೆ (Vatal Nagaraj | Karnataka | Bangalore | Kannada)
Bookmark and Share Feedback Print
 
NRB
ನಗರದಲ್ಲಿ ಹಾಗೂ ರಾಜ್ಯದಲ್ಲಿ ಕನ್ನಡ ಉಳಿಸಿ ಬೆಳೆಸಿ ಎಂದು ಜನರಲ್ಲಿ ಜಾಗೃತಿ ಮೂಡಿಸಲು ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಮಂಗಳವಾರ ನಡುರಸ್ತೆಯಲ್ಲಿ ಮಲಗುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಮೈಸೂರ್ ಬ್ಯಾಂಕ್ ವೃತ್ತದ ಬಳಿ ನಡುರಸ್ತೆಯಲ್ಲಿ ಮಲಗಿದ ವಾಟಾಳ್ ಮತ್ತು ಅವರ ಬೆಂಬಲಿಗರು ಸಾರ್ವಜನಿಕರ ಗಮನ ಸೆಳೆದರು. ನಗರದಲ್ಲಿ ಹೊರರಾಜ್ಯಗಳಿಂದ ಬಂದ ವಲಸಿಗರೆ ಹೆಚ್ಚಾಗಿದ್ದಾರೆ. ನಗರದಲ್ಲಿ ಕನ್ನಡ ಮಾಯಾವಾಗುತ್ತಿದೆ ಎಂದು ದೂರಿದ ಅವರು, ಕನ್ನಡ ಉಳಿಯಬೇಕಾದರೆ ನಾವೆಲ್ಲಾ ಒಟ್ಟಾಗಬೇಕಿದೆ ಎಂದರು.

ಜನವರಿ ಅಂತ್ಯದಲ್ಲಿ ಅನ್ಯಭಾಷೆ ನಾಮಫಲಕಗಳನ್ನು ಸುಟ್ಟು, ಕನ್ನಡ ಚಿತ್ರಗಳಿಲ್ಲದ ಚಿತ್ರಮಂದಿರಗಳಿಗೆ ಮುತ್ತಿಗೆ ಹಾಕಿ, ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡದ ಕಂಪನಿಗಳನ್ನು ಧ್ವಂಸ ಮಾಡುವುದಾಗಿ ವಾಟಾಳ್ ಎಚ್ಚರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ