ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜಕೀಯ ಸ್ವಾರ್ಥಕ್ಕಾಗಿ ಗೌಡರ 'ನೈಸ್' ಹೋರಾಟ: ಶೋಭಾ (Deve gowda | Shobha karandlaje | BJP | NICE | Kheny)
Bookmark and Share Feedback Print
 
ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಕಾರಣಗಳಿಂದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೈಸ್ ವಿಚಾರದಲ್ಲಿ ಹೋರಾಟ ನಡೆಸುವ ಮೂಲಕ ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ದೂರಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು-ಮೈಸೂರು ನಡುವಿನ ನೈಸ್ ರಸ್ತೆ ಯೋಜನೆ ಮೂಲ ಒಪ್ಪಂದದಲ್ಲೇ ರೈತ ವಿರೋಧಿಯಾಗಿದೆ. ಈ ಬಗ್ಗೆ ವಿವಾದ ಸುಪ್ರೀಂಕೋರ್ಟ್‌ನಲ್ಲಿ ಇರುವುದರಿಂದ ನೈಸ್ ಕುರಿತಂತೆ ಸುಪ್ರೀಂಕೋರ್ಟ್ ಸೂಕ್ತವಾದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದರು.

ಆದರೆ ದೇವೇಗೌಡರು ಸ್ವಾರ್ಥ ರಾಜಕಾರಣಕ್ಕಾಗಿ ರೈತ ಪರ ಹೋರಾಟ ನಡೆಸಿ, ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೌಡರು ಹಿರಿಯ ರಾಜಕಾರಣಿ, ದೇಶದ ಪ್ರಧಾನಿ ಗದ್ದುಗೆ ಏರಿದವರು. ಆದರೆ ಅವರು ರಾಜ್ಯದ ಮುಖ್ಯಮಂತ್ರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದಿರುವ ಅವರನ್ನು ಮಾಜಿ ಪ್ರಧಾನಿ ಎನ್ನಲು ನಾಚಿಕೆ ಆಗುತ್ತದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ