ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕ್ರಿಮಿನಲ್ ಹಿನ್ನೆಲೆಯವರಿಗೆ ಟಿಕೆಟ್ ಇಲ್ಲ: ದೇಶಪಾಂಡೆ (KPCC | Desh pandy | Shiv kumar | Congress | Sonia gandhi)
Bookmark and Share Feedback Print
 
NRB
ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಟಿಕೆಟ್ ನೀಡದಿರಲು ಪ್ರದೇಶ ಕಾಂಗ್ರೆಸ್ ಸಮಿತಿ ನಿರ್ಧರಿಸಿರುವುದಾಗಿ ತಿಳಿಸಿದೆ.

ಚುನಾವಣಾ ಪೂರ್ವಸಿದ್ಧತೆ ಕುರಿತು ನಡೆದ ಪಕ್ಷದ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರಿನ 27 ವಿಧಾನಸಭಾ ಕ್ಷೇತ್ರಗಳ ವೀಕ್ಷಕರ ಸಭೆಯಲ್ಲಿ, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಚುನಾವಣೆಯಿಂದ ದೂರವಿಡಲು ನಿರ್ಧರಿಸಿದೆ.

ಪಕ್ಷದ ಸಂಘಟನೆ ಮತ್ತು ಬಲವರ್ಧನೆಯಲ್ಲಿ ತೊಡಗಿಸಿಕೊಂಡ ಕಾರ್ಯಕರ್ತರಿಗೆ ಟಿಕೆಟ್ ವಿತರಣೆಯಲ್ಲಿ ಆದ್ಯತೆ ನೀಡಲಾಗುವುದು. ಯಾವುದೇ ಕಾರಣಕ್ಕೂ ಅಪರಾಧ ಹಿನ್ನೆಲೆಯವರಿಗೆ ಟಿಕೆಟ್ ನೀಡುವುದಿಲ್ಲ ಎಂದು ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮರ್ ಮತ್ತು ಮುಖಂಡರಾದ ವಿ.ಎಸ್.ಉಗ್ರಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಸಂಬಂಧಿತ ಮಾಹಿತಿ ಹುಡುಕಿ