ರಾಜ್ಯದಲ್ಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ ಗೋಹತ್ಯೆ ನಿಷೇಧ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುವುದಾಗಿ ವಿಧಾನಪರಿಷತ್ ವಿಪಕ್ಷ ನಾಯಕಿ ಕಾಂಗ್ರೆಸ್ನ ಮೋಟಮ್ಮ ತಿಳಿಸಿದ್ದು, ಗೋಹತ್ಯೆ ನಿಷೇಧ ಮಸೂದೆ ಜಾರಿಗೆ ತರುವ ಮೂಲಕ ಬಿಜೆಪಿ ಕೋಮುಭಾವನೆ ಕೆರಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದರು.
ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ರೈತ ಪರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಕಡತ ವಿಲೇವಾರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅನರ್ಹರಿಗೆ ಬಿಪಿಎಲ್ ಪಡಿತರ ನೀಡಲಾಗಿದೆ ಎಂದರು.
ಅಲ್ಲದೇ, ಬಿಜೆಪಿ ಮತ್ತು ಜೆಡಿಎಸ್ ಕಚ್ಚಾಟದಿಂದಾಗಿ ಕಾಂಗ್ರೆಸ್ಗೆ ವರದಾನವಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು. ಇದರಲ್ಲಿ ತೆರೆಮರೆ ಪ್ರಯತ್ನದ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.