ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಾನು ಜಾತಿ ರಾಜಕಾರಣ ಮಾಡಿಲ್ಲ: ಕುಮಾರಸ್ವಾಮಿ (Kumaraswamy | Lingayat | Deve Gowda | Yadyurappa)
Bookmark and Share Feedback Print
 
ಬಿಜೆಪಿಗೆ ಅಧಿಕಾರ ಹಸ್ತಾಂತರ ಮಾಡದಿರುವುದರಲ್ಲಿ ನನ್ನ ತಪ್ಪಿಲ್ಲ. ನಾನು ಜಾತಿ ರಾಜಕಾರಣ ಮಾಡಿಲ್ಲ. ರಾಜ್ಯದ ಜನತೆಗೆ ನಾನು ಎಂದೂ ಮೋಸ ಮಾಡಿಲ್ಲ. ನನಗೆ ಶಿಕ್ಷೆ ಕೊಡಬೇಡಿ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡ ನಂತರ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಜೆಡಿಎಸ್ ಪಕ್ಷ ಲಿಂಗಾಯುತ ವಿರೋಧಿ ಎಂದು ಮುಖ್ಯಮಂತ್ರಿ ಛೇಡಿಸುತ್ತಿದ್ದಾರೆ. ದೇವೇಗೌಡರು ಯಾವುದೇ ಲಿಂಗಾಯುತ ಧುರೀಣರಿಗೆ ಅನ್ಯಾಯ ಮಾಡಿಲ್ಲ. ದೇವೇಗೌಡರ ಬಗ್ಗೆ ಮಾತನಾಡಲು ಮುಖ್ಯಮಂತ್ರಿಗಳಿಗೆ ನೈತಿಕ ಹಕ್ಕಿಲ್ಲ ಎಂದರು.

ತಮ್ಮ 20 ತಿಂಗಳ ಆಡಳಿತಾವಧಿಯಲ್ಲಿ ರಾಜ್ಯ ಪ್ರಗತಿ ಕಂಡಿದೆ. ಗ್ರಾಮ ವಾಸ್ತವ್ಯ, ಮಕ್ಕಳಿಗೆ ಸೈಕಲ್, ರೈತರ ಸಾಲ ಮನ್ನಾ ಮುಂತಾದ ಜನಪರ ಯೋಜನೆಗಳನ್ನು ಜನರು ನೆನಪಿಸಿಕೊಳ್ಳುತ್ತಾರೆ. ಆದರೆ ಬಿಜೆಪಿ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದ್ದು ಸಾರ್ವಜನಿಕರೆಲ್ಲರಿಗೂ ಈಗ ಬೇಡವಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ