ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಪ್ರತಿಮ ದೇಶಭಕ್ತ ನೇತಾಜಿ ಸುಭಾಶ್ಚಂದ್ರ ಬೋಸ್: ಸಿಎಂ (Yeddyurappa | Nethaji | Bangalore | BJP)
Bookmark and Share Feedback Print
 
ಕ್ರಾಂತಿಕಾರಿ ಹೋರಾಟಗಾರ, ದೇಶಭಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ದೇಶದ ಗುಲಾಮಗಿರಿಯನ್ನು ಸಹಿಸದೆ ಅದರ ವಿರುದ್ಧ ಹೋರಾಟ ಮಾಡಿದ ಧೀರ ಬೋಸ್ ಜನಮಾನಸದಲ್ಲಿ ನೆಲೆಸಿದ್ದಾರೆ ಎಂದು ಬಣ್ಣಿಸಿದರು.

ವಿಧಾನಸೌಧದ ಮುಂದಿರುವ ನೇತಾಜಿ ಅವರ 113ನೇ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದೇಶದ ಯುವ ಪೀಳಿಗೆ ಬೋಸ್‌ರ ಮಾರ್ಗದರ್ಶನವನ್ನು ರೂಢಿಸಿಕೊಳ್ಳುವ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜರಾಜೇಶ್ವರಿ ನಗರದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವನದ ನಿರ್ಮಾಣ ಸಂಬಂಧ ತಮ್ಮ ಸಹಿ ಹಾಕಿದರು.
ಸಂಬಂಧಿತ ಮಾಹಿತಿ ಹುಡುಕಿ