ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾಡಬಾರ್ದು: ಈಶ್ವರಪ್ಪ (Siddaramaiah | Ishwarappa | Congress | Yeddyurappa, BJP)
Bookmark and Share Feedback Print
 
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಬೇಕು ಎಂದಿರುವ ಇಂಧನ ಸಚಿವ ಕೆ.ಎಸ್.ಈಶ್ವರಪ್ಪ, ಅವರು ಬಾಯಿಗೆ ಬಂದಂತೆ ಮಾತನಾಡುವುದು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರಾದ ಕೂಡಲೇ ಸಿದ್ದರಾಮಯ್ಯ ಅವರ ವರ್ತನೆಯೇ ಬದಲಾಗಿದೆ. ಹಾಗೆಯೇ ಯಾವಾಗಲು ಕೆಟ್ಟ ಚಿಂತನೆ , ಕೆಟ್ಟ ಮಾತುಗಳನ್ನೇ ಉದುರಿಸುತ್ತಿರುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಹಿರಿಯ ರಾಜಕಾರಣಿಗಳು ಕಿರಿಯರಿಗೆ ಮಾರ್ಗದರ್ಶಕರಾಗಿರಬೇಕು. ವಿನಯವಂತಿಕೆ ಇರಬೇಕು. ಆದರೆ ಇದ್ಯಾವ ಗುಣಗಳು ಸಿದ್ದರಾಮಯ್ಯ ಅವರಲ್ಲಿ ಕಾಣುತ್ತಿಲ್ಲವೆಂದು ಟೀಕಾಪ್ರಹಾರ ನಡೆಸಿದರು.

ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಜನವರಿ 30ರಂದು ನಡೆಯಲಿದೆ. ಪಕ್ಷದ ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತದೆಯೋ ಗೊತ್ತಿಲ್ಲ. ಅಲ್ಲಿಯವರೆಗೂ ಕಾದು ನೋಡಬೇಕಿದೆ ಎಂದು ಈಶ್ವರಪ್ಪ ಹೇಳಿದರು.

ಇಂಧನ ಸಚಿವ ಈಶ್ವರಪ್ಪ ಅವರು ರಾಜ್ಯಾಧ್ಯಕ್ಷರಾದರೆ ಬಿಜೆಪಿ ಸರ್ಕಾರ ಪತನವಾಗುವುದು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ