ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದು, ಅವರ ಜ್ಞಾನ, ಚುರುಕುತನ, ಶ್ರಮದಿಂದಾಗಿ ಕೆಲಸದಲ್ಲಿ ಯಶಸ್ವಿಯಾಗುತ್ತಿದ್ದಾರೆ ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಯಲಹಂಕಾದ ಸ್ತ್ರೀ ಸಂಘಟನೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದ ಸಾಮಾಜಿಕ ಕಾರ್ಯಕರ್ತೆಯಾಗಿ ಕೆಲಸ ನಿರ್ವಹಿಸುವುದರಲ್ಲಿ ತೃಪ್ತಿ ಕಂಡಿದ್ದು, ಈ ಹಿಂದೆ ಒಂದೂವರೆ ವರ್ಷದಲ್ಲಿ ಸಚಿವೆಯಾಗಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿದ್ದರ ಬಗ್ಗೆ ಸಂತೃಪ್ತಿ ಇದೆ. ಮುಂದಿನ ದಿನದಲ್ಲಿಯೂ ಸಹ ರಾಜ್ಯದ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಚರ್ಚಿಸುವುದಾಗಿ ಅವರು ಭರವಸೆ ನೀಡಿದರು.
ಮುಂದಿನ ದಿನಗಳಲ್ಲಿ ಮಹಿಳೆಯರು ಸಮಾಜದ ಆಗುಹೋಗುಗಳ ಬಗ್ಗೆ ಅರಿವು ಪಡೆದು ಆರ್ಥಿಕವಾಗಿ ಬಲಾಢ್ಯರಾಗಬೇಕು ಹಾಗೂ ಪ್ರತಿಯೊಬ್ಬ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಪಡೆಯಬೇಕು ಎಂದು ಶೋಭಾ ಕರೆ ನೀಡಿದರು.