ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಂ.ಎಸ್.ಐ.ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಶಿವರಾಂ ಅವರಿಗೆ ಸುಯೋಗ ಆಶ್ರಯ ಮತ್ತು ಅಭಿವೃದ್ಧಿ ಟ್ರಸ್ಟ್ ನಡೆಸುತ್ತಿರುವ ಜೆರುಸಲೇಂ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.
ಯವನಿಕಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿ ಸ್ಥಾಪಕ ರೆವರೆಂಡ್ ಡಾ.ವಿ.ಆಲ್ಬರ್ಟ್ ಜಯಸಿಂಗ್ ಅವರು ಡಾಕ್ಟರೇಟ್ ಪ್ರದಾನ ಮಾಡಿದರು. ಎಚ್.ಡಿ.ಕುಮಾರಸ್ವಾಮಿ ಪರವಾಗಿ ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ರಾಮನಾಥ ಹೆಗಡೆ ಪದವಿ ಸ್ವೀಕರಿಸಿದರು.
ಕಳೆದ ವರ್ಷ ಅಮೆರಿಕದ ಮಿಚಿಗನ್ ರಾಜ್ಯದ ಸಗಿನಾವ್ ವ್ಯಾಲಿ ಸ್ಟೇಟ್ ಯೂನಿರ್ವಸಿಟಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಗೌರಡ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಈ ಸಂದರ್ಭದಲ್ಲಿ ಡಾಕ್ಟರೇಟ್ ಪಡೆದ ಮುಖ್ಯಮಂತ್ರಿಗಳ ವಿರುದ್ಧ ಪ್ರತಿಪಕ್ಷಗಳು ಟೀಕಾ ಪ್ರಹಾರ ನಡೆಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.