ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೋಮುವಾದಿಗಳಿಗೆ ಮುಖ್ಯಮಂತ್ರಿ ಕುಮ್ಮಕ್ಕು: ಸುಬ್ಬಯ್ಯ (Yeddyurappa | BJP | Church attack | Subbayya | Bangalore)
Bookmark and Share Feedback Print
 
ಚರ್ಚ್ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರೋಕ್ಷವಾಗಿ ಕೋಮುವಾದಿ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆಂದು ಹಿರಿಯ ರಾಜಕಾರಣಿ ಎ.ಕೆ.ಸುಬ್ಬಯ್ಯ ಆರೋಪಿಸಿದ್ದಾರೆ.

ಬೆಂಗಳೂರು ನಾಗರಿಕ ವೇದಿಕೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರ ಮತ್ತು ಚಳವಳಿಗಾರರ ಮೇಲಿನ ಮೊಕದ್ದಮೆ ವಾಪಸ್ ಪಡೆಯದೆ ಸಂಘ ಪರಿವಾರದ ಮೇಲಿನ ಮೊಕದ್ದಮೆಗಳನ್ನು ವಾಪಸ್ ಪಡೆಯದೆ, ಸಂಘ ಪರಿವಾರದ ವಿರುದ್ಧ ಹೂಡಲಾದ ಮೊಕದ್ದಮೆಗಳನ್ನು ವಾಪಸ್ ಪಡೆಯುವ ಮೂಲಕ ಕೋಮುಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆಂದು ದೂರಿದರು.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಚರ್ಚ್‌ಗಳ ಮೇಲಿನ ದಾಳಿ ಹೆಚ್ಚಾಗಿದೆ ಎಂದು ಆಪಾದಿಸಿದ ಅವರು, ಯಡಿಯೂರಪ್ಪ ಅವರು ಜನಪರ ನಾಯಕರಾಗಿ ಬೆಳೆದಿಲ್ಲ. ಮಹಾನ್ ಭ್ರಷ್ಟಾಚಾರಿಯಾಗಿ ಬೆಳೆದಿದ್ದಾರೆಂದು ಟೀಕಿಸಿದರು.
ಸಂಬಂಧಿತ ಮಾಹಿತಿ ಹುಡುಕಿ