ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಚರ್ಚ್ ದಾಳಿಕೋರರ ಹೆಸರು ಬಹಿರಂಗಪಡಿಸಿ: ಸಿಎಂಗೆ ದೇಶಪಾಂಡೆ (Desh pandy | Congress | Church attack | BJP)
Bookmark and Share Feedback Print
 
ರಾಜ್ಯದ ಚರ್ಚ್‌ಗಳ ಮೇಲೆ ನಡೆದ ದಾಳಿ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಹಿರಂಗಪಡಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚರ್ಚ್‌ಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಮೇಲೆ ಅನಾವಶ್ಯಕವಾಗಿಆರೋಪವನ್ನು ಮಾಡುವುದನ್ನು ಬಿಟ್ಟು ದಾಳಿ ಹಿಂದೆ ಇರುವವರ ಹೆಸರನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಚರ್ಚ್‌ಗಳ ಮೇಲೆ ದಾಳಿ ನಡೆಸುತ್ತಿರುವವರು ಸಂಘ ಪರಿವಾರದವರು ಎಂದು ಗಂಭೀರವಾಗಿ ಆರೋಪ ಮಾಡಿದ ಅವರು, ಸಂವಿಧಾನಬದ್ಧವಾಗಿ ಅಲ್ಪಸಂಖ್ಯಾತರ ರಕ್ಷಣೆ ಮಾಡುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಉಳಿಯುವ ನೈತಿಕ ಹಕ್ಕಿಲ್ಲ ಎಂದು ಪ್ರತಿಪಾದಿಸಿದರು.

ಈಶ್ವರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತಿರುವುದರಿಂದ ಆ ಪಕ್ಷ ಹಿಂದುಳಿದವರ ಪರ ಇದೆ ಎಂದು ಭಾವಿಸಲಾಗದು ಎಂದು ದೇಶಪಾಂಡೆ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ