ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಸರ್ಕಾರಕ್ಕೆ ಪ್ರಚಾರದ ಆಸೆಯಿಲ್ಲ: ಯಡಿಯೂರಪ್ಪ (BJP | Yeddyurappa | Congress | JDS | Deve gowda)
Bookmark and Share Feedback Print
 
ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಪ್ರಚಾರದ ಆಸೆಯಿಲ್ಲ, ಆದರೆ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ಉತ್ತರ ಕೊಡಬೇಕು ಅಂತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠದಲ್ಲಿ ಸಂಸ್ಥಾನವು ನೆರೆ ಸಂತ್ರಸ್ತರಿಗಾಗಿ ನಿರ್ಮಿಸಲು ಉದ್ದೇಶಿಸಿರುವ ಮಾದರಿ ಮನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೆರೆ ಸಂತ್ರಸ್ತರ ನೆರವಿಗೆ ನಿಂತು ಅವರಿಗೆ ಬದುಕು ಕಟ್ಟಿಕೊಡುವುದೇ ಸರ್ಕಾರದ ಮುಖ್ಯ ಗುರಿ ಎಂದು ಈ ಸಂದರ್ಭದಲ್ಲಿ ಹೇಳಿದರು. ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡಬೇಕು ಎಂದು ಸಂವಿಧಾನದಲ್ಲಿ ಏನಾದರು ಇದೆಯೇ?ಇಲ್ಲ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಲ್ಲಿ ರೈತರಿಂದ ಭೂಮಿ ಪಡೆದು ಲೇಔಟ್ ಮಾಡಿ ಹಂಚಿದ ಉದಾಹರಣೆ ಇಲ್ಲ. ನಮ್ಮ ಸರ್ಕಾರ ಈ ಕೆಲಸ ಮಾಡಿದೆ ಎಂದರು.

ಸಾರ್ವಜನಿಕರು ಉದಾರ ದೇಣಿಗೆ ನೀಡಿದ್ದಾರೆ. ಸರ್ಕಾರ ಅವರ ಜತೆ ಕೈಜೋಡಿಸಿ ಸಂತ್ರಸ್ತರ ಜೀವನದಲ್ಲಿ ಆಶಾಕಿರಣ ಮೂಡಿಸಲು ಪ್ರಯತ್ನ ಮಾಡುತ್ತಿದೆ. ಆದರೆ ಪ್ರತಿಪಕ್ಷಗಳು ಅನಾವಶ್ಯಕವಾಗಿ ಕೂಗೆಬ್ಬಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ