ಬಿಜೆಪಿ ಪಕ್ಷದ ನೂತದ ಅಧ್ಯಕ್ಷರಾಗಿರುವ ಕೆ.ಎಸ್.ಈಶ್ವರಪ್ಪನವರು ಮುಖ್ಯಮಂತ್ರಿ ಕುರ್ಚಿಯ ಮೇಲೆ ಆಸೆಯಿಟ್ಟುಕೊಂಡು ಪಕ್ಷದ ಅಧ್ಯಕ್ಷರಾಗದೇ ಪಕ್ಷದ ಸಿದ್ದಾಂತಗಳಂತೆ ಕಾರ್ಯನಿರ್ವಹಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಸಲಹೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಾಜ್ಯದ ದಲಿತರು, ಮಹಿಳೆಯರು, ದುರ್ಬಲರ ಪರ ನ್ಯಾಯ ಒದಗಿಸಲು ಶ್ರಮಿಸಿ ಪಕ್ಷದ ಅಭಿವೃದ್ದಿಗೆ ಈಶ್ವರಪ್ಪನವರು ಮುಖ್ಯಮಂತ್ರಿ ಅವರೊಂದಿಗೆ ಕೈಜೋಡಿಸುವ ಮೂಲಕ ಯಶಸ್ವಿಯಾಗಲಿ ಎಂದರು.
ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಶ್ರೀಕೃಷ್ಣದೇವರಾಯನ ಹೆಸರಿಡುವ ನಿರ್ಧಾರವನ್ನು ಕೈ ಬಿಡಲಾಗಿದೆ. ಕೊಪ್ಪಳ ಮತ್ತು ಬಳ್ಳಾರಿ ಸೇರಿಸಿ ನೂತನ ವಿಶ್ವವಿದ್ಯಾಲಯ ಸ್ಥಾಪಿಸಿ ಅದಕ್ಕೆ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.