ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶೀಘ್ರವೇ ವಿಧಾನಮಂಡಲ ಅಧಿವೇಶನ ಕರೆಯಿರಿ: ಮೋಟಮ್ಮ (Congress | KPCC | BBMP | BJP | Motamma)
Bookmark and Share Feedback Print
 
ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯವೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲು ತುರ್ತು ವಿಧಾನಮಂಡಲ ಅಧಿವೇಶನವನ್ನು ಕರೆಯುವಂತೆ ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕಿ ಮೋಟಮ್ಮ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯವನ್ನು ಹಲವು ಸಮಸ್ಯೆಗಳು ಕಾಡುತ್ತಿದ್ದು, ಇದೆಲ್ಲದರ ಬಗ್ಗೆ ಚರ್ಚಿಸಲು ಅಧಿವೇಶನವನ್ನು ಕರೆಯಬೇಕಿದೆ ಎಂದರು.

ರಾಜ್ಯದ ಆಡಳಿತ ಯಂತ್ರ ಸಮರ್ಪಕವಾಗಿ ಸಾಗದೇ ಇರುವುದರಿಂದ ಜನಸಾಮಾನ್ಯರು ಬೇಸತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಆಂತರಿಕ ಭಿನ್ನಮತದಿಂದ ಕಂಗಾಲಾಗಿದ್ದು, ತಮ್ಮ ಕುರ್ಚಿ ಅಭದ್ರವಾಗಿದೆ ಎಂಬ ಭೀತಿಯಲ್ಲಿ ನರಳುತ್ತಿದ್ದಾರೆ. ಇದರ ಪರಿಣಾಮ ಉತ್ತಮ ಆಡಳಿತ ಕೊಡಲು ಅವರ ಕೈಲಾಗುತ್ತಿಲ್ಲ ಎಂದು ದೂರಿದರು.

ಯಾವ ಕ್ಷಣದಲ್ಲಾದರೂ ಸರ್ಕಾರ ಬೀಳಬಹುದು. ಆ ರೀತಿ ಯಡಿಯೂರಪ್ಪ ತಮ್ಮ ಸಚಿವರನ್ನು ಇಟ್ಟುಕೊಂಡಿದ್ದಾರೆ ಎಂದು ಮೋಟಮ್ಮ ಸಿ.ಎಂ ವಿರುದ್ಧ ಕಿಡಿ ಕಾರಿದರು
ಸಂಬಂಧಿತ ಮಾಹಿತಿ ಹುಡುಕಿ