ಬಿಬಿಎಂಪಿ-ಸುಪ್ರೀಂ ತೀರ್ಪಿನ ನಂತ್ರ ಮುಂದಿನ ನಿರ್ಧಾರ: ಬಿಜೆಪಿ
ಬೆಂಗಳೂರು, ಶನಿವಾರ, 30 ಜನವರಿ 2010( 17:18 IST )
PTI
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್ವಾರು ಮೀಸಲು ಪಟ್ಟಿಗೆ ಸಂಬಂಧಿಸಿದಂತೆ ನ್ಯಾಯಾಲಯ ಹಾಗೂ ಚುನಾವಣಾ ಆಯೋಗದ ನಿರ್ದೇಶನದಂತೆಯೇ ನಡೆದುಕೊಳ್ಳಲಾಗುವುದು ಎಂದು ಕಾನೂನು ಸಂಸದೀಯ ಮತ್ತು ನಗರಾಭಿವೃದ್ಧಿ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪನ್ನು ನೋಡಿಕೊಂಡು ಪ್ರತಿಕ್ರಿಯಿಸುವುದಾಗಿ ಚುನಾವಣಾ ಆಯೋಗಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಸೋಮವಾರ ಅಥವಾ ಮಂಗಳವಾರದ ಒಳಗಾಗಿ ತೀರ್ಪಿನ ವಿವರ ತಿಳಿಯಲಿದೆ. ಆ ನಂತರ ಆಯೋಗಕ್ಕೆ ಸರ್ಕಾರದ ನಿಲುವು ತಿಳಿಸುತ್ತೇವೆ ಎಂದರು.
ಯುಎನ್ಐ ದಕ್ಷಿಣ ಭಾರತ ನೌಕರರ ಒಕ್ಕೂಟದ 15ನೇ ವಾರ್ಷಿಕೋತ್ಸವ ಸಮಾರಂಭದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನ್ಯಾಯಾಲಯ ಹಾಗೂ ಆಯೋಗ ಏನು ನಿರ್ದೇಶನ ನೀಡುತ್ತದೆಯೋ ಅದರಂತೆ ನಡೆದುಕೊಳ್ಳುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದರು.