ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮುಖ್ಯಮಂತ್ರಿ ಭೇಟಿ ಸಮಾಧಾನ ತಂದಿಲ್ಲ: ದೇವೇಗೌಡ (Deve gowda | yeddyurappa | NICE | Hassan)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವರಿಗೆ ನೈಸ್ ವಿಚಾರದ ವಿವರವನ್ನು ನೀಡಿದ್ದೇನೆಯೇ ಹೊರತು ಅಷ್ಟಕ್ಕೆ ಸಮಾಧಾನವಾಗಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕವಾಗಿ ಮುಖ್ಯಮಂತ್ರಿಗಳು ಉತ್ತರ ನೀಡಿಲ್ಲ ಹಾಗೂ ಜಂಟಿ ಪತ್ರಿಕಾಗೋಷ್ಠಿಯಲ್ಲೂ ಯಾವುದೇ ಹೇಳಿಕೆ ನೀಡಿಲ್ಲ. ಆದುದರಿಂದ ನೈಸ್‌ಗೆ ರೈತರ ಭೂಮಿ ನೀಡುವುದರ ವಿರುದ್ಧ ಹೋರಾಟ ಶಾಂತಿಯುತವಾಗಿ ಮುಂದುವರಿಯಲಿದೆ ಎಂದು ಗೌಡರು ಸುದ್ದಿಗಾರರಿಗೆ ತಿಳಿಸಿದರು.

ನೈಸ್ ವಿವಾದ ಕುರಿತಂತೆ ತಾವು ಮಂಡಿಸಿದ ಬೇಡಿಕೆಗಳು ಹಾಗೂ ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಉನ್ನತಾಧಿಕಾರದ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ