ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರಚೋದನಾಕಾರಿ ಹೇಳಿಕೆ: ಸಿಎಂ ವಿರುದ್ಧ ದೂರು ದಾಖಲು (BJP | Yeddyurappa | Shivmoga | Congress | UPA)
Bookmark and Share Feedback Print
 
ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕಾಂಗ್ರೆಸ್ ಶಿವಮೊಗ್ಗದಲ್ಲಿ ಮಂಗಳವಾರ ದೂರನ್ನು ದಾಖಲಿಸಿದೆ.

ಸೋಮವಾರ ಗುಲ್ಬರ್ಗಾದಲ್ಲಿ ನಡೆದ ಸಾರ್ವಜನಿಕ ಸಮಾರಂಭವೊಂದರಲ್ಲಿ ಮುಖ್ಯಮಂತ್ರಿಗಳು ಮಾತನಾಡುತ್ತ, ತನ್ನ ವಿರುದ್ಧ ಯಾರಾದ್ರು ಟೀಕೆ ಮಾಡಿದರೆ ಅವರ ನಾಲಿಗೆ ಸೀಳಬೇಕು ಎಂದು ಹೇಳಿದ್ದರು. ಯಡಿಯೂರಪ್ಪ ಅವರ ಈ ಉದ್ರೇಕಕಾರಿ ಹೇಳಿಕೆಯನ್ನು ಖಂಡಸಿ ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಸಮಿತಿ ಇಲ್ಲಿನ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ.

ಬಹಿರಂಗವಾಗಿ ಉದ್ರೇಕಕಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಇಲ್ಲಿನ ಜಯನಗರ ಠಾಣೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ದೂರನ್ನು ದಾಖಲಿಸಿದೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ಬಹಿರಂಗವಾಗಿ ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ