ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸರ್ಕಾರದ ವಿರುದ್ಧ ಮತ್ತೆ ರಾಜ್ಯಪಾಲರ ವಾಗ್ದಾಳಿ (Bangalore | BJP | BBMP | Congress | Government)
Bookmark and Share Feedback Print
 
ಆಡಳಿತಾರೂಢ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಾಗ್ದಾಳಿ ಮುಂದುವರಿದಿದ್ದು, ಚರ್ಚ್ ದಾಳಿ ಮತ್ತು ಆಡಳಿತ ಅವ್ಯವಸ್ಥೆ ಬಗ್ಗೆ ಕಿಡಿಕಾರಿದ್ದಾರೆ.

ಬಿಬಿಎಂಪಿ ಚುನಾವಣೆ ಸಂಬಂಧವಾಗಿ ಪರೋಕ್ಷವಾಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಖಾಸಗಿ ಹೊಟೇಲ್‌ನಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಆರೋಗ್ಯ, ಪರಿಸರ ಸಂಸ್ಥೆ ಹಮ್ಮಿಕೊಂಡಿದ್ದ ಮಕ್ಕಳ ಆರೋಗ್ಯ ಮತ್ತು ಪರಿಸರ ಕುರಿತ ಐದನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಸ್ಥಳೀಯ ಸಂಸ್ಥೆಯಲ್ಲಿ ಜನಪ್ರತಿನಿಧಿಗಳಲಿಲ್ಲದೆ ಆರೋಗ್ಯ, ಪರಿಸರ ಸ್ವಚ್ಛತೆ ಹಾಳಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಗಣರಾಜ್ಯೋತ್ಸವ ಸಮಾರಂಭದಲ್ಲಿಯೂ ಚರ್ಚ್ ಮತ್ತು ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿಯನ್ನು ಪ್ರಸ್ತಾಪಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು. ಇದೀಗ ಬಿಬಿಎಂಪಿ ಚುನಾವಣೆ ವಿಳಂಬದ ಬಗ್ಗೆ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ