ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಿಪಕ್ಷಗಳ ಟೀಕೆಗೆ ಸಿಎಂ ಯಡಿಯೂರಪ್ಪ ಗರಂ (Yeddyurappa | BJP | Congress | JDS | Karnataka)
Bookmark and Share Feedback Print
 
ರಾಜ್ಯದ ಹಣಕಾಸು ಪರಿಸ್ಥಿತಿ ಹದಗೆಟ್ಟಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ ವೇತನ ನೀಡಲು ಸಾಲ ಮಾಡಲಾಗಿದೆ ಎಂಬ ವಿಪಕ್ಷಗಳ ಆರೋಪ ಸತ್ಯಕ್ಕೆ ದುರವಾದುದು, ಇದೆಲ್ಲ ಆಧಾರಗಳಿಲ್ಲದ ಆರೋಪ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷದ ಡಿಸೆಂಬರ್ ಅಂತ್ಯಕ್ಕೆ ಕೊನೆಗೊಂಡಂತೆ ಹಣಕಾಸು ಪರಿಸ್ಥಿತಿಯ ವಾಸ್ತವ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದರು. ಜಾಗತಿಕ ಮತ್ತು ಆರ್ಥಿಕ ಹಿನ್ನೆಡೆಯ ನಡುವೆಯೂ ಉತ್ತಮ ಆರ್ಥಿಕ ನಿರ್ವಹಣೆ ಮಾಡಿದ ಕೀರ್ತಿಗೆ ರಾಜ್ಯ ಪಾತ್ರವಾಗಿದೆ ಎಂದರು.

ರಾಜ್ಯದ ಹಣಕಾಸು ಪರಿಸ್ಥಿತಿ ಹದಗೆಟ್ಟಿಲ್ಲ. ಈ ಬಗ್ಗೆ 13ನೆ ಹಣಕಾಸು ಆಯೋಗ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಿದ್ದರೂ ವಿರೋಧ ಪಕ್ಷಗಳು ಸತ್ಯಕ್ಕೆ ದೂರವಾದ ಅಂಕಿ ಅಂಶಗಳನ್ನು ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿವೆ ಎಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ