ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯ ಸರ್ಕಾರವನ್ನು ವಜಾ ಮಾಡಿ: ದೇಶಪಾಂಡೆ (Congeessa | Deah pandy | JDS | Karnataka)
Bookmark and Share Feedback Print
 
NRB
ರಾಜ್ಯದಲ್ಲಿ ದುರ್ಬಲ ವರ್ಗ ಮತ್ತು ಅಲ್ಪಸಂಖ್ಯಾತರನ್ನು ಸಂರಕ್ಷಿಸುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಆಗ್ರಹಿಸಿದ್ದಾರೆ.

ಚರ್ಚ್ ದಾಳಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸೋಮಶೇಖರ ವರ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಅಲ್ಪಸಂಖ್ಯಾತರ ಮತ್ತು ದುರ್ಬಲ ವರ್ಗದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಂವಿಧಾನದ ಪ್ರಕಾರ ಸರ್ಕಾರವನ್ನು ವಜಾ ಮಾಡಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ರಾಜ್ಯದ ಹಲವೆಡೆ ನಡೆದ ಚರ್ಚ್ ದಾಳಿಗೆ ಹಿಂದೂ ಸಂಘಟನೆಗಳೇ ಕಾರಣ ಎಂದು ವರದಿಯಲ್ಲಿ ತಿಳಿಸಿರುವುದರಿಂದ ಅಂತಹ ಸಂಘಟನೆಗಳ ಬಣ್ಣ ಬಯಲಾದಂತಾಗಿದೆ. ಆದ್ದರಿಂದ ಯಡಿಯೂರಪ್ಪ ಅವರ ಸರ್ಕಾರ ರಾಜೀನಾಮೆ ನೀಡಬೇಕು ಎಂದು ದೇಶಪಾಂಡೆ ಒತ್ತಾಯಿಸಿದರು.
ಸಂಬಂಧಿತ ಮಾಹಿತಿ ಹುಡುಕಿ