ಚರ್ಚ್ ದಾಳಿ ಸಂಬಂಧ ನ್ಯಾಯಮೂರ್ತಿ ಬಿ.ಕೆ.ಸೋಮಶೇಖರ್ ಆಯೋಗದ ವರದಿ ಬಿಜೆಪಿ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ, ಇದರಿಂದಾಗಿ ಬಿಜೆಪಿ ನಿಜಬಣ್ಣ ಬಯಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಚರ್ಚ್ ದಾಳಿ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವೇ ನೇಮಿಸಿದ ನ್ಯಾ.ಸೋಮಶೇಖರ್ ಆಯೋಗ ತನ್ನ ವರದಿಯಲ್ಲಿ ಹೇಳಿರುವ ಎಲ್ಲರೂ ಮೇಲೂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಚರ್ಚ್ ದಾಳಿ ಪ್ರಕರಣಗಳಿಗೆ ಕಾರಣರಾದ ಶ್ರೀರಾಮಸೇನೆ, ಬಜರಂಗದಳ, ವಿಶ್ವ ಹಿಂದೂ ಪರಿಷತ್ಗಳನ್ನು ನಿಷೇಧಿಸುವಂತೆ ಆಗ್ರಹಿಸಿದ್ದ ಅವರು ಈ ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಲ ವಿರುದ್ಧ ಸಹ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ರಾಜ್ಯದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವವರ ಕೈ ಕಡಿಯಿರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈಗ ಅವರು ಯಾರ ಕೈ ಕೈಡಿಯುತ್ತಾರೆ ನೋಡೋಣ ಎಂದರು.