ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಆಯೋಗದ ವರದಿಯಿಂದ ಬಿಜೆಪಿ ನಿಜಬಣ್ಣ ಬಯಲು: ಖರ್ಗೆ (Mallikarjuna kharge | BJP | Congress | Church attack)
Bookmark and Share Feedback Print
 
ಚರ್ಚ್ ದಾಳಿ ಸಂಬಂಧ ನ್ಯಾಯಮೂರ್ತಿ ಬಿ.ಕೆ.ಸೋಮಶೇಖರ್ ಆಯೋಗದ ವರದಿ ಬಿಜೆಪಿ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ, ಇದರಿಂದಾಗಿ ಬಿಜೆಪಿ ನಿಜಬಣ್ಣ ಬಯಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಚರ್ಚ್ ದಾಳಿ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವೇ ನೇಮಿಸಿದ ನ್ಯಾ.ಸೋಮಶೇಖರ್ ಆಯೋಗ ತನ್ನ ವರದಿಯಲ್ಲಿ ಹೇಳಿರುವ ಎಲ್ಲರೂ ಮೇಲೂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಚರ್ಚ್ ದಾಳಿ ಪ್ರಕರಣಗಳಿಗೆ ಕಾರಣರಾದ ಶ್ರೀರಾಮಸೇನೆ, ಬಜರಂಗದಳ, ವಿಶ್ವ ಹಿಂದೂ ಪರಿಷತ್‌ಗಳನ್ನು ನಿಷೇಧಿಸುವಂತೆ ಆಗ್ರಹಿಸಿದ್ದ ಅವರು ಈ ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಲ ವಿರುದ್ಧ ಸಹ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ರಾಜ್ಯದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವವರ ಕೈ ಕಡಿಯಿರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈಗ ಅವರು ಯಾರ ಕೈ ಕೈಡಿಯುತ್ತಾರೆ ನೋಡೋಣ ಎಂದರು.
ಸಂಬಂಧಿತ ಮಾಹಿತಿ ಹುಡುಕಿ