ರಾಜ್ಯದಲ್ಲಿನ ಚರ್ಚ್ ಮೇಲಿನ ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ಕೆ.ಸೋಮಶೇಖರ್ ವಿಚಾರಣಾ ಆಯೋಗ ನೀಡಿರುವ ಮಧ್ಯಂತರ ವರದಿ ಬಗ್ಗೆ ಸರ್ಕಾರದ ನಿಲುವನ್ನು ಕೂಡಲೇ ಸ್ಪಷ್ಟಪಡಿಸಬೇಕೆಂದು ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಚಾರಣಾ ಆಯೋಗದ ವರದಿಯ ಅಂಶಗಳು ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಕೆಲವು ಕಟು ಸತ್ಯಗಳು ಬಹಿರಂಗಗೊಂಡಿವೆ. ವರದಿ ರಹಸ್ಯವಾಗಿ ಉಳಿದಿಲ್ಲ. ಆದರೂ ವರದಿಯನ್ನು ಅಧ್ಯಯನ ಮಾಡಿದ ಬಳಿಕ ಜೆಡಿಎಸ್ ನಿಲುವು ಸ್ಪಷ್ಟಪಡಿಸಲಾಗುವುದು ಎಂದು ಅವರು ಹೇಳಿದರು.
ಸರ್ಕಾರ ಆಯೋಗದ ವರದಿ ಬಗ್ಗೆ ಯಾವ ನಿಲುವು ತಳೆಯಲಿದೆ ಎಂಬುದನ್ನು ಕಾದು ನೋಡಲಾಗುವುದು. ಸರ್ಕಾರದ ನಿಲುವು ಹಾಗೂ ವರದಿಯನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿದ ನಂತರ ಪಕ್ಷದ ನಿಲುವನ್ನು ಸ್ಪಷ್ಟಪಡಿಸಲಾಗುವುದು ಎಂದರು.