ಮಲೆನಾಡು ಪ್ರದೇಶದಲ್ಲಿ ಕಳೆದ ಐದಾರು ತಿಂಗಳಿಂದ ನಕ್ಸಲೀಯರ ಕಾರ್ಯಚಟುವಟಿಕೆ ತಟಸ್ಥವಾಗಿದ್ದು, ಇದೀಗ ಆಗುಂಬೆ ಪ್ರದೇಶದಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ.
ಆಗುಂಬೆ ಸಮೀಪದ ಶುಂಠಿ ಹಕ್ಲು ಪ್ರದೇಶದಲ್ಲಿ ಕಾಣಿಸಿಕೊಂಡಿರುವ ನಕ್ಸಲರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬರೆದ ಕರಪತ್ರಗಳನ್ನು ಎಸೆದು ಪರಾರಿಯಾಗಿದ್ದಾರೆ.
ಇತ್ತೀಚೆಗೆ ಉಡುಪಿ ಜಿಲ್ಲೆಯ ಅಮಾಸೆಬೈಲು ಹಾಗೂ ತೊಂಬಟ್ಟು ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ನಕ್ಸಲರು, ಇದೀಗ ಆಗುಂಬೆ ಸಮೀಪದ ಬಿದರಗೋಡ್ಲು ಗ್ರಾಮದ ಬಳಿ ಪ್ರತ್ಯಕ್ಷರಾಗಿದ್ದಾರೆ.
ವಿಷಯ ತಿಳಿದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಾರಿಯಲ್ಲಿ ಬಿದ್ದಿದ್ದ ಕರಪತ್ರಗಳನ್ನು ಸಂಗ್ರಹಿಸಿದ್ದಾರೆ. ಈ ಸಂಬಂಧ ಕಾರ್ಯಾಚರಣೆ ಮುಂದುವರಿದಿದ್ದು, ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.