ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಮೇಲ್ಮನೆಗೆ ನಾಮ ನಿರ್ದೇಶನ ಮಾಡುವ ಶಿಫಾರಸ್ಸನ್ನು ರಾಜ್ಯಪಾಲರು ತಿರಸ್ಕರಿಸಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರಸ್ಕರಿಸಿದ್ದಾರೆ.
ಕೆಪಿಸಿಎಲ್ನಲ್ಲಿ ನಡೆದಿರುವ ಬಜೆಟ್ ಪೂರ್ವ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಹಾಗೂ ಲೋಕಾಯುಕ್ತರ ಬಗ್ಗೆ ಗೌರವ ಹೊಂದಿದ್ದೇನೆ. ಆ ನಿಟ್ಟಿನಲ್ಲಿ ಅವರ ನಿರ್ಧಾರಗಳ ಬದ್ದೆ ಮಾಧ್ಯಮದ ಮುಂದೆ ಯಾವುದೇ ಅಭಿಪ್ರಾಯ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದರು.
ಮಾಜಿ ಸಚಿವ ಸೋಮಣ್ಣ ಅವರ ವಿಚಾರದಲ್ಲಿ ರಾಜ್ಯಪಾಲರ ನಡವಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದಷ್ಟೇ ಹೇಳಿದ ಅವರು, ಮೂರನೇ ವ್ಯಕ್ತಿಯ ಆಯ್ಕೆಯ ಕುರಿತು ಪಕ್ಷದ ಮುಖಂಡರೊಂದಿಗೆ ಚರ್ಚಿಸುವುದಾಗಿ ಈ ಸಂದರ್ಭದಲ್ಲಿ ಹೇಳಿದರು.