ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಗೋಡು ತಿಮ್ಮಪ್ಪ ಟೀಕೆಯನ್ನು ಸಾಬೀತುಪಡಿಸಲಿ: ಈಶ್ವರಪ್ಪ (Kagodu Thimmappa | Ishwarappa | BJP | Congress)
Bookmark and Share Feedback Print
 
ಮುಖ್ಯಮಂತ್ರಿ ವಿರುದ್ಧ ಟೀಕೆ ಮಾಡಿದ್ದರೆ, ಕಾಗೋಡು ತಿಮ್ಮಪ್ಪ ಅದನ್ನು ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಗೋಡು ತಿಮ್ಮಪ್ಪನವರು ಸಕ್ರಿಯ ರಾಜಕಾರಣದಲ್ಲಿ ಇರುವ ಬಗ್ಗೆ ತೋರ್ಪಡಿಸಿಕೊಳ್ಳಲು ಇಂತಹ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದೂರಿದರು.

ಅಲ್ಲದೆ, ಕಾಗೋಡು ತಿಮ್ಮಪ್ಪನವರು ಎಲ್ಲಿದ್ದಾರೆ? ಯಾವ ಪಕ್ಷದಲ್ಲಿದ್ದಾರೆ? ಎಂಬುದೇ ತಿಳಿದಿಲ್ಲ. ಅಂತಹವರು ಮಾಧ್ಯಮದ ಮೂಲಕ ಪ್ರಚಾರ ಪಡೆಯುವ ನಿಟ್ಟಿನಲ್ಲಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹರಿಹಾಯ್ದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಅರವಿಂದ ಲಿಂಬಾವಳಿ, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಎಸ್ಸಿ ಮೋರ್ಚಾ ಸಂಘಟನೆಯೊಂದಿಗೆ ಸಭೆ ನಡೆಸಿದ್ದೇನೆ. ಇದರ ಹೊರತು ಇನ್ನಾವುದೇ ಅಸಮಾಧಾನದಿಂದಲ್ಲ. ಇದನ್ನು ತಪ್ಪಾಗಿ ಕಲ್ಪಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ