ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಹಿಂದೇಟು ಹಾಕಲ್ಲ: ಆಚಾರ್ಯ
ಬೆಂಗಳೂರು, ಶುಕ್ರವಾರ, 5 ಫೆಬ್ರವರಿ 2010( 16:45 IST )
ರಾಜ್ಯದ ವಿವಿಧೆಡೆ 2008ರಲ್ಲಿ ನಡೆದ ಚರ್ಚ್, ಪ್ರಾರ್ಥನಾ ಮಂದಿರ ದಾಳಿ ಕುರಿತಂತೆ ಆರೋಪಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಗೃಹ ಸಚಿವ ವಿ.ಎಸ್.ಆಚಾರ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರು ರಸ್ತೆ, ಪೊಲೀಸ್ ಆಸ್ಪತ್ರೆ, ಸಿರ್ಸಿ ವೃತ್ತದ ಬಳಿ ಶುಕ್ರವಾರ ನಡೆದ ಬೃಹತ್ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಚರ್ಚ್ಗಳ ಮೇಲಿನ ದಾಳಿಗಳು ಉದ್ದೇಶ ಪೂರ್ವಕವಾಗಿ ನಡೆದ ಕೃತ್ಯಗಳಾಗಿವೆ. ಆ ನಿಟ್ಟಿನಲ್ಲಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ಗಳಂತಹ ಮಾರಕ ಖಾಯಿಲೆಗಳು ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಸಚಿವರು, ಇದನ್ನು ಪ್ರಾಥಮಿಕ ಹಂತದಲ್ಲೇ ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ಪಡೆದು ತಡೆಗಟ್ಟಬೇಕೆಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.