ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶೀಘ್ರವೇ ಸಿಎಂ ಅಕ್ರಮ ಆಸ್ತಿ ಬಹಿರಂಗಪಡಿಸುವೆ: ಬಂಗಾರಪ್ಪ (Bangarappa | Yeddyurappa | BJP | Congress)
Bookmark and Share Feedback Print
 
ಶಿವಮೊಗ್ಗ ದಂಡಾವತಿ ಯೋಜನೆ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ನೇತೃತ್ವದಲ್ಲಿ ಸಿಂಗೂರ್ ಮಾದರಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಎಚ್ಚರಿಸಿದ್ದಾರೆ.

ತಮ್ಮ ನಿವಾಸದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು ಬಹಿರಂಗವಾಗಿ ಹಿಂಸಾ ಪ್ರಚೋದಕ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಹೊಡಿ-ಬಡಿ ಸಂಸ್ಕೃತಿಯನ್ನು ಬೆಳೆಸುತ್ತಿದ್ದಾರೆಂದು ದೂರಿದರು.

ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಶಿವಮೊಗ್ಗ, ಬೆಂಗಳೂರು, ಮೈಸೂರುಗಳಲ್ಲಿ ಸಂಪಾದಿಸಿರುವ ಆಸ್ತಿಯ ವಿವರವನ್ನು ಶೀಘ್ರವೇ ಬಹಿರಂಗಗೊಳಿಸುವುದಾಗಿ ಹೇಳಿದ ಅವರು, ಅಗತ್ಯ ದಾಖಲೆಗಳನ್ನು ಕಲೆ ಹಾಕುತ್ತಿರುವುದಾಗಿ ಹೇಳಿದರು.

ನ್ಯಾಯಮೂರ್ತಿ ಸೋಮಶೇಖರ ಆಯೋಗದ ವರದಿಯಂತೆ ಹಿಂದೂಪರ ಸಂಘಟನೆಗಳು ಚರ್ಚ್ ದಾಳಿಯಲ್ಲಿ ಪಾಲ್ಗೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈಗ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರಶ್ನಿಸಿದರು.
ಸಂಬಂಧಿತ ಮಾಹಿತಿ ಹುಡುಕಿ