ಶಸ್ತ್ರಾಸ್ತ್ರ ಹಿಡಿದು ಅಲೆಯುವುದು ಬಿಟ್ಟುಬಿಡಿ: ನಕ್ಸಲ್ರಿಗೆ ಸಿಎಂ
ಬೆಂಗಳೂರು, ಸೋಮವಾರ, 8 ಫೆಬ್ರವರಿ 2010( 14:56 IST )
ಕಾಡು ಮೇಡು ಅಲೆಯುವುದು ಬಿಟ್ಟು ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗುವ ನಕ್ಸಲರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ನಮ್ಮ ಸರ್ಕಾರ ತೀವ್ರ ಪರಿಶೀಲನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಆಂತರಿಕ ಭದ್ರತೆ ಕುರಿತ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವುದರಿಂದ ಉಗ್ರರ ಕಣ್ಣು ಬೀಳುವುದು ಸಹಜ. ಉಗ್ರರನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ ರಾಜ್ಯದಲ್ಲಿ ಕಮಾಂಡೋ ತರಬೇತಿ ಕೇಂದ್ರ ಸ್ಥಾಪನೆಗೆ 20 ಕೋಟಿ ರೂ. ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.