ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶಸ್ತ್ರಾಸ್ತ್ರ ಹಿಡಿದು ಅಲೆಯುವುದು ಬಿಟ್ಟುಬಿಡಿ: ನಕ್ಸಲ್‌ರಿಗೆ ಸಿಎಂ (Yeddyurappa | Naxal | BJP | Karnataka | Bangalore)
Bookmark and Share Feedback Print
 
ಕಾಡು ಮೇಡು ಅಲೆಯುವುದು ಬಿಟ್ಟು ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗುವ ನಕ್ಸಲರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ನಮ್ಮ ಸರ್ಕಾರ ತೀವ್ರ ಪರಿಶೀಲನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಆಂತರಿಕ ಭದ್ರತೆ ಕುರಿತ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವುದರಿಂದ ಉಗ್ರರ ಕಣ್ಣು ಬೀಳುವುದು ಸಹಜ. ಉಗ್ರರನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ ರಾಜ್ಯದಲ್ಲಿ ಕಮಾಂಡೋ ತರಬೇತಿ ಕೇಂದ್ರ ಸ್ಥಾಪನೆಗೆ 20 ಕೋಟಿ ರೂ. ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ