ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 38 ಬೃಹತ್ ಕೈಗಾರಿಕೆಗೆ ಮಂಜೂರಾತಿ: ನಿರಾಣಿ (BJP | Bangalore | Karnataka | Mitthal | Yeddyurappa)
Bookmark and Share Feedback Print
 
1038 ಸಾವಿರ ಕೋಟಿ ರೂ.ಬಂಡವಾಳ ಹೂಡಿಕೆಯ 38 ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯದಲ್ಲಿ ಮಂಜೂರಾತಿ ನೀಡಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಈ ಯೋಜನೆಗಳಿಗೆ 35ಸಾವಿರ ಎಕರೆ ಜಮೀನು ನೀಡಲು ಸಮ್ಮತಿಸಲಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜನವರಿ 5ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತಾಧಿಕಾರಿಗಳ ಸಮಿತಿಯ ಸಭೆಯಲ್ಲಿ 38 ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದರು.

ಮಿತ್ತಲ್ ಕಂಪನಿಯು ಸೇರಿದಂತೆ ವಿವಿಧ ಕಂಪನಿಗಳು ಉಕ್ಕು, ಕಬ್ಬಿಣ, ರಸಗೊಬ್ಬರ, ಸಿಮೆಂಟ್ ಮತ್ತಿತರ ವಲಯಗಳಲ್ಲಿ ಬಂಡವಾಳ ಹೂಡಲು ಮುಂದೆ ಬಂದಿವೆ ಎಂದು ಅವರು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ