ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಂಇಎಸ್‌ಗೆ ನಿಷೇಧ ಹೇರಿ: ಕರ್ನಾಟಕ ರಕ್ಷಣಾ ವೇದಿಕೆ (MES | Kannada vedike | Narayana gowda | Maharastra)
Bookmark and Share Feedback Print
 
ಕನ್ನಡ ಭಾಷೆಯ ದ್ವೇಷಿಯಾಗಿರುವ ಮರಾಠಿ ಏಕೀಕರಣ ಸಮಿತಿ(ಎಂಇಎಸ್)ಯನ್ನು ರಾಜ್ಯ ಸರ್ಕಾರ ಕೂಡಲೇ ನಿಷೇಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಯಲಹಂಕಾ ಉಪನಗರದಿಂದ ಯಲಹಂಕ ಪೊಲೀಸ್ ಠಾಣೆಯವರೆಗೆ ಗುರುವಾರ ಟಿ.ಎ.ನಾರಾಯಣ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವೇದಿಕೆಯ ಕಾರ್ಯಕರ್ತರು, ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಕನ್ನಡಿಗರ ವಿರೋಧದ ನಡುವೆಯೂ ಮರಾಠಿ ಸೀಮಾ ಪರಿಷತ್ ಕಾರ್ಯಕ್ರಮ ನಡೆಸಿ ಕನ್ನಡಿಗ ಮತ್ತು ಮರಾಠಿಗರ ನಡುವೆ ವಿಷ ಬೀಜ ಬಿತ್ತಿದ ಏಕೀಕರಣ ಸಮಿತಿಯ ಮುಖಂಡರನ್ನು ಬಂಧಿಸಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಅಲ್ಲದೇ, ಮರಾಠಿ ಸೀಮಾ ಪರಿಷತ್‌ಗೆ ವಿರೋಧ ವ್ಯಕ್ತಪಡಿಸಿದ ರಕ್ಷಣಾ ವೇದಿಕೆಯ ಮುಖಂಡರನ್ನು ಕೂಡಲೇ ಬಿಡುಗಡೆಗೊಳಿಸಬೇಕು, ಅವರ ಮೇಲೆ ಹೂಡಿರುವ ಮೊಕದ್ದಮೆಗಳನ್ನು ವಾಪಸು ಪಡೆಯಬೇಕೆಂದು ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದರು.
ಸಂಬಂಧಿತ ಮಾಹಿತಿ ಹುಡುಕಿ