ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರ ರೆಡ್ಡಿ ಭಿನ್ನ ಹೇಳಿಕೆ ನೀಡುವ ಮೂಲಕ ಗೊಂದಲ ಹುಟ್ಟುಹಾಕಿದ್ದಾರೆ.
ಹಾಲಿನ ಬೆಲೆ ಹೆಚ್ಚಳಕ್ಕೆ ಮಾಡುವ ಬಗ್ಗೆ ಇನ್ನು ಕೂಡ ಯಾವುದೇ ಪ್ರಸ್ತಾಪ ಬಂದಿಲ್ಲ. ಈ ಬಗ್ಗೆ ಇನ್ನು ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಸಂಬಂಧ ನನ್ನೊಂದಿಗೆ ಇದುವರೆಗೆ ಯಾರೊಬ್ಬರು ಚರ್ಚೆ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಈ ಮೊದಲು ಬರುವ ಮಾರ್ಚ್ 1ರಿಂದ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 3ರಿಂದ 4ರೂ. ಹೆಚ್ಚಳವಾಗಲಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಮೌಖಿಕ ಒಪ್ಪಿಗೆ ನೀಡಿದ್ದಾರೆ ಎಂದು ಸೋಮಶೇಖರ ರೆಡ್ಡಿ ತಿಳಿಸಿದ್ದರು.