ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜನಪರ ಕಾಳಜಿಯಿಲ್ಲದ ಸರಕಾರ: ಕುಮಾರಸ್ವಾಮಿ (Kumaraswmay | BJP | JDS | Bangalore | Congress)
Bookmark and Share Feedback Print
 
ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ತಮ್ಮ ಟೀಕಾಪ್ರಹಾರವನ್ನು ಮುಂದುವರಿಸಿದ್ದು, ಬೆಲೆ ಏರಿಕೆಯ ಗಂಭೀರ ವಿಚಾರದ ಬಗ್ಗೆ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ ಅವರು ಆಪಾದಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣದ ಕುರಿತ ಪ್ರಧಾನಿ ಕರೆದ ಸಭೆಗೆ ಹಾಜರಾಗದ ಮುಖ್ಯಮಂತ್ರಿ ಯಡಿಯೂರಪ್ಪ ಶ್ರೀಶೈಲಕ್ಕೆ ಯಾತ್ರೆಗೆ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

ಬೆಲೆ ಏರಿಕೆ, ಮಹದಾಯಿ ವಿಚಾರ ಇದಾವುದರಲ್ಲೂ ಮಾನ್ಯ ಮುಖ್ಯಮಂತ್ರಿಗಳಿಗೆ ಆಸಕ್ತಿ ಇದ್ದಂತೆ ತೋರುವುದಿಲ್ಲ ಎಂದು ಕುಮಾರಸ್ವಾಮಿ ಎಂದಿನಂತೆ ರಾಜ್ಯ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ