ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸದೆ ಮುಂದೂಡುವುದೇ ಲೇಸು ಎಂಬ ಅಭಿಪ್ರಾಯ ಶನಿವಾರ ನಡೆದ ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ವ್ಯಕ್ತವಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ನಡೆಸುವ ಸಾಹಸಕ್ಕೆ ಕೈಹಾಕದೆ, ಚುನಾವಣೆ ಮುಂದೂಡಲು ಅನುಸರಿಸಬೇಕಾದ ಕಾರ್ಯತಂತ್ರ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಅಧಿವೇಶನ ನಡೆಯುವ ಸಂದರ್ಭದಲ್ಲಿ ಚುನಾವಣೆ ಎದುರಾದರೆ, ಸರ್ಕಾರ ಮುಜುಗರ ಪರಿಸ್ಥಿತಿ ಎದುರಿಸಬೇಕಾದೀತು. ಇದು ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹೀಗಾಗಿ ಬೀಸೋ ದೊಣ್ಣೆಯಿಂದ ಪಾರಾಗಲು ಸುಪ್ರೀಂಕೋರ್ಟ್ ಮೊರೆ ಹೋಗಲು ಈ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.
ಅಲ್ಲದೆ, ಪಕ್ಷಕ್ಕೆ ಹೊಸ ಪದಾಧಿಕಾರಿಗಳ ನೇಮಕ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತಂತೆ ಇಂದಿನ ಸಭೆಯಲ್ಲಿ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಯಿತು.