ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೌಡರ ನೈಸ್ ಹೋರಾಟ ಚುನಾವಣಾ ಗಿಮಿಕ್: ಅಶೋಕ್ (Deve gowda | JDS | NICE | Ashok | Kheny)
Bookmark and Share Feedback Print
 
ಗ್ರಾಮಪಂಚಾಯ್ತಿ, ತಾಲೂಕು ಪಂಚಾಯ್ತಿ, ಬಿಬಿಎಂಪಿ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನೈಸ್ ಬಗ್ಗೆ ಹೋರಾಟ ಮಾಡುತ್ತಿದ್ದಾರೆಂದು ಸಾರಿಗೆ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ.

ಅವರು ಸೋಮವಾರ ಬೆಂಗಳೂರಿನಿಂದ ಚಿಕ್ಕಮಗಳೂರಿನತ್ತ ಹೋಗುತ್ತಿದ್ದ ಸಂದರ್ಭದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, 15ವರ್ಷದಿಂದ ನೈಸ್ ಬಗ್ಗೆ ಯಾರು ಯಾಕೆ ಚಕಾರ ಎತ್ತಲಿಲ್ಲ ಎಂದು ಪ್ರಶ್ನಿಸಿದರು.

ನೈಸ್‌ಗೆ ದೇವೇಗೌಡರೇ 2000ಎಕರೆ ಭೂಮಿ ನೀಡಿದ್ದು, ಈಗ ಅವರೇ ಏಕೆ ವಿರೋಧ ಮಾಡುತ್ತಿದ್ದಾರೆಂದು ತಿಳಿಯಲು ಇವರೇ ಬೆಳೆಸಿದ ಕೂಸನ್ನು ಈಗ ಸಾಯಿಸಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಬಿಎಂಪಿ ಚುನಾವಣೆ ನಡೆಸಲು ನಾವು ಹಿಂದೇಟು ಹಾಕಿಲ್ಲ, ದಳ ಮತ್ತು ಕಾಂಗ್ರೆಸ್ ಪಕ್ಷದವರು ಚುನಾವಣೆಗೆ ಒಲವು ತೋರುತ್ತಿಲ್ಲ. ಅನಾವಶ್ಯಕವಾಗಿ ಬಿಜೆಪಿ ಸರ್ಕಾರದ ವಿರುದ್ಧ ಗೂಬೆ ಕೂರಿಸುತ್ತಿದ್ದಾರೆಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ