ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರ ರೈತರ ಕೃಷಿ ಜಮೀನನ್ನು ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಂಗಳವಾರದಿಂದ ರಾಜ್ಯವ್ಯಾಪಿ ಪ್ರವಾಸ ಆರಂಭಿಸಿ ರೈತರಲ್ಲಿ ಜಾಗೃತಿ ಮೂಡಿಸಲಿದ್ದಾರೆ.
ನಾಳೆ ತುಮಕೂರಿನಿಂದ ಗೌಡರು ರೈತ ಜಾಗೃತಿ ಸಮಾವೇಶಕ್ಕೆ ಚಾಲನೆ ನೀಡಲಿದ್ದು, ಫೆಬ್ರುವರಿ 17ರಂದು ಧಾರವಾಡ ಹಾಗೂ ಬಿಜಾಪುರದಲ್ಲಿ ರೈತ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ.19ರಂದು ಶಿವಮೊಗ್ಗದಲ್ಲಿ ದಂಡಾವತಿ ಯೋಜನೆ ವಿರುದ್ಧ ನಡೆಯಲಿರುವ ರೈತರ ಹೋರಾಟದಲ್ಲಿ ಪಾಲ್ಗೊಂಡು ಅಂದೇ ದಾವಣಗೆರೆ ರೈತರ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಫೆ.24ರಂದು ಅಂತಿಮವಾಗಿ ಬೆಂಗಳೂರಿನಲ್ಲಿ ಜೆಡಿಎಸ್ ವತಿಯಿಂದ ಭಾರೀ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಗೆ ರಾಜ್ಯವ್ಯಾಪಿ ಸಾವಿರಾರು ಮಂದಿ ರೈತರು ಭಾಗವಹಿಸಲಿದ್ದಾರೆ.