ವಿಮಾನ ಅಪಘಾತದಲ್ಲಿ ಮೃತರಾದ 158 ಪ್ರಯಾಣಿಕರ ಮೃತದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, 87 ಮೃತದೇಹಗಳನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರ ಹರಪ್ರೀತ್ ಸಿಂಗ್ ಹೇಳಿದ್ದಾರೆ.
ಮೃತರಾದವರ ಕುಟುಂಬಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲು ಏರ್ ಇಂಡಿಯಾ ಪ್ರಯತ್ನಿಸುತ್ತಿದೆ.ಅಧಿಕಾರಿಗಳು ಮಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.
ಅಮೆರಿಕ ಮೂಲದ ಕೆನ್ಯಾನ್ ಕಂಪೆನಿ ತುರ್ತು ಸಮರೋಪಾದಿ ಕಾರ್ಯನಿರ್ವಹಣೆಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು, ಏರ್ಇಂಡಿಯಾ ಕಾರ್ಯದಲ್ಲಿ ನೆರವು ನೀಡುವಂತೆ ಕೋರಲಾಗಿದೆ ಎಂದು ಹರ್ಪ್ರೀತ್ ಸಿಂಗ್ ಹೇಳಿದ್ದಾರೆ.
ಆದರೆ, ಮೃತದೇಹಗಳನ್ನು ವಾರಸುದಾರರ ವಶಕ್ಕೆ ಒಪ್ಪಿಸುವಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.