ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಕಚ್ಚಾಟ: ಜಗದೀಶ್ ಶೆಟ್ಟರ್ (Jagadish Shettar | BJP | Yeddyurappa | Siddaramaiah | Desh pandy)
Bookmark and Share Feedback Print
 
ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ಮುಖಂಡರಲ್ಲಿ ಈಗಲೇ ಕಚ್ಚಾಟ ಆರಂಭವಾಗಿದೆ ಎಂದು ಜಗದೀಶ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಅವರು 'ನಮ್ಮ ಮನೆ' ಯೋಜನೆಯಡಿ ಮನೆಗಳ ನಿರ್ಮಾಣದ ಶಂಕುಸ್ಥಾಪನಾ ಸಮಾರಂಭದ ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಪಾದಯಾತ್ರೆ ಹಾಗೂ ಸಮಾವೇಶದ ನಂತರ ಭ್ರಮೆಯಲ್ಲಿರುವ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿ ಪಟ್ಟಕ್ಕಾಗಿ ಈಗಲೇ ಕಚ್ಚಾಡುತ್ತಿದ್ದಾರೆ ಎಂದು ಮೂದಲಿಸಿದರು.

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಣುತ್ತಿರುವ ಕನಸನ್ನು ಸಚಿವರೆಲ್ಲರೂ ನನಸು ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಮುಖ್ಯಮಂತ್ರಿಗೆ ಬಿಟ್ಟ ವಿಚಾರವಾಗಿದ್ದು, ಈ ಬಗ್ಗೆ ಏನೂ ಹೇಳಲು ಬಯಸುವುದಿಲ್ಲ ಎಂದರು.
ಸಂಬಂಧಿತ ಮಾಹಿತಿ ಹುಡುಕಿ