ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿಗೆ ಕಡೂರು ಜನರೇ ತಕ್ಕ ಪಾಠ ಕಲಿಸ್ತಾರೆ: ದತ್ತ (BJP | JDS | Yeddyurappa | Congress | Deve gowda)
Bookmark and Share Feedback Print
 
ಆಶ್ವಾಸನೆಗಳ ಮೂಲಕ ಜನರ ದಿಕ್ಕು ತಪ್ಪಿಸುತ್ತಿರುವ ಆಡಳಿತಾರೂಢ ಬಿಜೆಪಿ ಸರಕಾರಕ್ಕೆ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಜೆಡಿಎಸ್ ಹುರಿಯಾಳು ವೈ.ಎಸ್.ವಿ.ದತ್ತ ತಿಳಿಸಿದ್ದಾರೆ.

ಸೋಮವಾರ ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿ ಬಿಜೆಪಿ ದುರಾಡಳಿತಕ್ಕೆ ಇಲ್ಲಿನ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಆಡಳಿತಾರೂಢ ಬಿಜೆಪಿ ಸರಕಾರದಲ್ಲಿನ ಶಾಸಕರು, ಮಂತ್ರಿಗಳು ಜನಸಾಮಾನ್ಯರೊಂದಿಗೆ ಅಹಂಕಾರದಿಂದ ವರ್ತಿಸುತ್ತಿದ್ದಾರೆ. ರೈತ ವಿರೋಧಿ ನೀತಿ ಅನುಸರಿಸಿ, ಜನರ ಸಂಕಷ್ಟಗಳಿಗೆ ಸ್ಪಂದಿಸದೆ ಸರ್ವಾಧಿಕಾರ ನಡೆಸುತ್ತಿರುವುದಾಗಿ ದತ್ತಾ ಆರೋಪಿಸಿದರು.

ಕಡೂರು ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿಲ್ಲ ಎಂಬ ಕಾರಣಕ್ಕಾಗಿಯೇ ಕ್ಷೇತ್ರವನ್ನು ಬಿಜೆಪಿ ಸರಕಾರ ಕಡೆಗಣಿಸಿದೆ. ಆದರೂ ಉಪ ಚುನಾವಣೆಯಲ್ಲಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಗೆಲುವು ಸಾಧಿಸುವ ತಂತ್ರ ಬಿಜೆಪಿ ಹೆಣೆದಿದಿ ಎಂದು ದೂರಿದರು. ಉಪ ಚುನಾವಣೆಯಲ್ಲಿ ಬಿಜೆಪಿಯ ಹಣ, ಹೆಂಡಕ್ಕೆ ಮರುಳಾಗದೆ,ಕಡೂರು ಕ್ಷೇತ್ರದ ಮತದಾರರು ತಕ್ಕ ಉತ್ತರ ನೀಡುತ್ತಾರೆಂಬ ವಿಶ್ವಾಸ ಇರುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ